August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸಂಭ್ರಮ ಶನಿವಾರ’ ಆಚರಣೆ

ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳ ಒತ್ತಡವಿಲ್ಲದೆ ಅನುಭವಾತ್ಮಕ, ಸೃಜನಾತ್ಮಕ, ಹಾಗೂ ಜೀವನ ಕೌಶಲ್ಯ ಆಧಾರಿತ ಕಲಿಕೆಯನ್ನು ಒದಗಿಸುವ ಸಲುವಾಗಿ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಸಂಭ್ರಮ ಶನಿವಾರ’ ಕಾರ್ಯಕ್ರಮವನ್ನು ಎಸ್‌ಡಿಎಂ ಅನುದಾನಿತ ಹಿ.ಪ್ರಾ ಶಾಲೆ ಉಜಿರೆಯಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವು ಮಕ್ಕಳ ಶಾಲೆಯ ಬ್ಯಾಗ್ ನ ಭಾರವನ್ನು ಕಡಿಮೆ ಮಾಡುವುದು, ಆಟ, ಕಲೆ, ಸಂಗೀತ, ನಾಟಕ, ವಿಜ್ಞಾನ ಇಂತಹ ವಿಷಯಗಳನ್ನು ಚಟುವಟಿಕೆಗಳ ಮೂಲಕ ಕಲಿಸುವುದು, ಮಕ್ಕಳಲ್ಲಿ ಜೀವನ ಕೌಶಲ್ಯ ಮತ್ತು ಸಾಮಾಜಿಕ ಜಾಗೃತಿಯನ್ನು ಬೆಳೆಸುವುದು ಹೀಗೆ ಮುಂತಾದ ಉದ್ದೇಶಗಳನ್ನು ಹೊಂದಿದೆ.
ಕಾರ್ಯಕ್ರಮದ ಪ್ರಯುಕ್ತ ವಿಶೇಷ ಚೇತನ ವುಳ್ಳ ವ್ಯಕ್ತಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ಪ್ರಸ್ತುತ ಗ್ರಾಮೀಣ ವಿಶೇಷ ಚೇತನ ಅಭ್ಯರ್ಥಿಗಳ ಪುನರ್ವಸತಿ ಕಾರ್ಯಕರ್ತರಾಗಿರುವ ವಿಪುಲ ಕುಮಾರ್ ಮಾತನಾಡಿ “ವಿಶೇಷ ಚೇತನ ಮಕ್ಕಳಿಗೆ ಹೆಚ್ಚಿನ ಅವಕಾಶದ ಅಗತ್ಯತೆ ಇದೆ, ಎಲ್ಲ ಕ್ಷೇತ್ರಗಳಲ್ಲೂ ವಿಶೇಷ ಚೇತನರು ಗುರುತಿಸಿಕೊಂಡಿದ್ದಾರೆ” ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ವಹಿಸಿದ್ದರು. ವಿಶೇಷ ಚೇತನರಿಗೆ ಸಂಬಂಧಿಸಿದಂತೆ ವಿವಿಧ ಬಿತ್ತಿ ಪತ್ರ ಅನಾವರಣಗೊಳಿಸಲಾಯಿತು. ಸಹ ಶಿಕ್ಷಕಿ ಗೀತಾ ಸ್ವಾಗತಿಸಿದರು, ಶಾಲಾ ಸಹ ಶಿಕ್ಷಕಿ ರೇವತಿ ವಂದನೆಗೈದರು, ಶಾಲಾ ಸಹ ಶಿಕ್ಷಕಿ ಗೀತಾ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ

Suddi Udaya

ಉದ್ಯಮಿ ರಾಜೇಶ್ ಪೈ ಅವರಿಗೆ “ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ” ಪ್ರದಾನ

Suddi Udaya

ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ರಂಜಿತ್ ಕುಮಾರ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ

Suddi Udaya

ನಾಳ ದೇವಸ್ಥಾನದಲ್ಲಿ ಯಕ್ಷಗಾನ ಬಯಲಾಟ

Suddi Udaya

ಮುಂಡಾಜೆ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!