August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ

ಬೆಳ್ತಂಗಡಿ: ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆ ಹಾಗೂ ಒಂದು ವಾರಗಳ ಕಾಲ ನಡೆದ ಯೋಗ ಶಿಬಿರದ ಸಮಾರೋಪ ಸಮಾರಂಭವು ಗಣ್ಯರ ಸಮ್ಮುಖದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಯಕ್ಷಗಾನ ಗುರುಗಳಾದ ಲಕ್ಷ್ಮಣ ಗೌಡ ಬೆಳಾಲು ಮಾತನಾಡಿ ” ಯೋಗ ಹಾಗೂ ಮಕ್ಕಳ ಮನಸ್ಸು ಒಂದಕ್ಕೊಂದು ಪೂರಕವಾಗಿದೆ. ಮುಂದಿನ ದಿನಗಳಲ್ಲಿ ಯಕ್ಷಗಾನ ವಿಶ್ವ ವ್ಯಾಪ್ತಿಯಾಗಲಿ” ಎಂದು ಶುಭ ಹಾರೈಸಿದರು. ಶ್ರೀ ಧರ್ಮಸ್ಥಳ ನ್ಯಾಚುರೋಪತಿ ಕಾಲೇಜಿನ ಉಪನ್ಯಾಸಕಿ ಡಾ‌. ರೆನಿತಾ ಮಾತನಾಡಿ “ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಯೋಗ ಸಹಕಾರಿ, ಜೊತೆಗೆ ಮಕ್ಕಳು ಉತ್ತಮ ಆಹಾರ ವನ್ನು ಸೇವನೆ ಮಾಡಿ ” ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ವಹಿಸಿದ್ದರು.

ವೇದಿಕೆಯಲ್ಲಿ ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕರರಾದ ಸಾನಿಕಾ ಹಾಗೂ ಅನಘಾ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಶಾಲಾ ಸಹ ಶಿಕ್ಷಕಿ ರೇವತಿ ಇವರು ಸ್ವಾಗತಿಸಿದರು. ಸಹ ಶಿಕ್ಷಕಿ ಗೀತಾ ವಂದಿಸಿದರು.
ಕಾರ್ಯಕ್ರಮದ ನಿರೂಪಣೆ ಯನ್ನು ಶಾಲಾ ಧೈಹಿಕ ಶಿಕ್ಷಣ ಶಿಕ್ಷಕ ಪ್ರಜ್ವಲ್ ನೆರವೇರಿಸಿದರು.

Related posts

ಇಂದಬೆಟ್ಟು : ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

Suddi Udaya

ಉಜಿರೆ : ದ್ವಿಚಕ್ರ ವಾಹನಗಳು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿ

Suddi Udaya

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ವೈಭವ: ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರಿಂದ ವಿವಿಧ ಸಮಿತಿಗಳ ಜೊತೆ ಸಮಾಲೋಚನಾ ಸಭೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ

Suddi Udaya
error: Content is protected !!