June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ

ಬೆಳ್ತಂಗಡಿ: ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆ ಹಾಗೂ ಒಂದು ವಾರಗಳ ಕಾಲ ನಡೆದ ಯೋಗ ಶಿಬಿರದ ಸಮಾರೋಪ ಸಮಾರಂಭವು ಗಣ್ಯರ ಸಮ್ಮುಖದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಯಕ್ಷಗಾನ ಗುರುಗಳಾದ ಲಕ್ಷ್ಮಣ ಗೌಡ ಬೆಳಾಲು ಮಾತನಾಡಿ ” ಯೋಗ ಹಾಗೂ ಮಕ್ಕಳ ಮನಸ್ಸು ಒಂದಕ್ಕೊಂದು ಪೂರಕವಾಗಿದೆ. ಮುಂದಿನ ದಿನಗಳಲ್ಲಿ ಯಕ್ಷಗಾನ ವಿಶ್ವ ವ್ಯಾಪ್ತಿಯಾಗಲಿ” ಎಂದು ಶುಭ ಹಾರೈಸಿದರು. ಶ್ರೀ ಧರ್ಮಸ್ಥಳ ನ್ಯಾಚುರೋಪತಿ ಕಾಲೇಜಿನ ಉಪನ್ಯಾಸಕಿ ಡಾ‌. ರೆನಿತಾ ಮಾತನಾಡಿ “ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಯೋಗ ಸಹಕಾರಿ, ಜೊತೆಗೆ ಮಕ್ಕಳು ಉತ್ತಮ ಆಹಾರ ವನ್ನು ಸೇವನೆ ಮಾಡಿ ” ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ವಹಿಸಿದ್ದರು.

ವೇದಿಕೆಯಲ್ಲಿ ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕರರಾದ ಸಾನಿಕಾ ಹಾಗೂ ಅನಘಾ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಶಾಲಾ ಸಹ ಶಿಕ್ಷಕಿ ರೇವತಿ ಇವರು ಸ್ವಾಗತಿಸಿದರು. ಸಹ ಶಿಕ್ಷಕಿ ಗೀತಾ ವಂದಿಸಿದರು.
ಕಾರ್ಯಕ್ರಮದ ನಿರೂಪಣೆ ಯನ್ನು ಶಾಲಾ ಧೈಹಿಕ ಶಿಕ್ಷಣ ಶಿಕ್ಷಕ ಪ್ರಜ್ವಲ್ ನೆರವೇರಿಸಿದರು.

Related posts

ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

Suddi Udaya

ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ “ಯಶೋ-ವಿಜಯ”ಬದುಕು-ನೆನೆಪು-ಸ್ಮರಣೆ ವಿಶೇಷ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

Suddi Udaya

ಧರ್ಮಸ್ಥಳ ನಾರ್ಯ ದಲ್ಲಿ ಸೇತುವೆ ಕುಸಿತ

Suddi Udaya

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

Suddi Udaya

ನ.9: ನಾಳ-ಗೇರುಕಟ್ಟೆ ಯಕ್ಷಾರಾಧನಾ ಕಲಾ ಪ್ರತಿಷ್ಠಾನ ಸಹಯೋಗದೊಂದಿಗೆ “ಯಕ್ಷೋತ್ಸವ”

Suddi Udaya
error: Content is protected !!