August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ2 ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

ಕನ್ಯಾಡಿ 2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2, ನೂತನ ಶಾಲಾ ಮಕ್ಕಳ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭವು ಜರಗಿತು. ಈ ಕಾರ್ಯಕ್ರಮವು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಅವರ ನೇತೃತ್ವದಲ್ಲಿ ನಡೆಯಿತು.

ಹೊಸದಾಗಿ ಆಯ್ಕೆಯಾದ ಶಾಲಾ ವಿದ್ಯಾರ್ಥಿಗಳ ನಾಯಕ ಲವಿತ್ ಮತ್ತು ಉಪ ನಾಯಕ ಪರಶುರಾಮ ಹಾಗೂ ಮಂತ್ರಿಮಂಡಲದ ಸರ್ವ ಸದಸ್ಯರು ಪ್ರಮಾಣವಚನವನ್ನು ಸ್ವೀಕರಿಸಿದರು. ಶಾಲೆಯ ಕರ್ತವ್ಯ, ಶಿಸ್ತು, ಜವಾಬ್ದಾರಿ ಸರಿಯಾಗಿ ನಿಭಾಯಿಸುವುದಾಗಿ ಪ್ರತಿಜ್ಞೆ ಮಾಡಿದರು.

ಈ ಪ್ರತಿಜ್ಞಾವಿಧಿಯನ್ನು ಶಾಲಾ ಮುಖ್ಯ ಶಿಕ್ಷಕಿ ಪುಷ್ಪಾ ಎನ್. ನಿರ್ವಹಿಸಿದರು. ಶಾಲಾ ಶಿಕ್ಷಕ ವೃಂದದವರು, ಎಸ್ ಡಿ ಎಮ್ ಸಿ ಯ ಅಧ್ಯಕ್ಷ ಕೆ ನಂದ ಮಕ್ಕಳಿಗೆ ಶುಭವನ್ನು ಹಾರೈಸಿದರು. ಶಿಕ್ಷಕ ವೃಂದದವರು, ಜೊತೆಗೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರುಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಹ ಶಿಕ್ಷಕ ನಾಗರಾಜ್ ಬಾರ್ಕೆರ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಬೆಳ್ತಂಗಡಿ ಕ್ಷೇತ್ರದ 81 ಗ್ರಾಮಗಳಿಗೆ ಭೇಟಿ

Suddi Udaya

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶಿರ್ಲಾಲು: ದರ್ಖಾಸು ಮನೆಯ ರಾಜು ಗೌಡ ಹೃದಯಾಘಾತದಿಂದ ನಿಧನ

Suddi Udaya

ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ರವರಿಂದ ಮತ ಚಲಾವಣೆ

Suddi Udaya
error: Content is protected !!