23.4 C
ಪುತ್ತೂರು, ಬೆಳ್ತಂಗಡಿ
June 26, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಗುರುವಾಯನಕೆರೆ “ಎಕ್ಸೆಲ್” ಟೆಕ್ನೋ ಶಾಲೆಯಲ್ಲಿ ದೀಕ್ಷಾರಂಭ

ಗುರುವಾಯನಕೆರೆ :“ಒಂದು ಕಾಲದಲ್ಲಿ ನಗರಗಳಲ್ಲಿ ಮಾತ್ರ ಗುಣಮಟ್ಟದ ಶಿಕ್ಷಣ ಲಭ್ಯವೆಂದು ನಂಬಲಾಗಿತ್ತು. ಇದರ ಪರಿಣಾಮವಾಗಿ ನಮ್ಮ ಪ್ರದೇಶದ ಅನೇಕ ಜನರು ಮಂಗಳೂರು-ಬೆಂಗಳೂರಿನಂತಹ ನಗರಗಳನ್ನೇ ವಿದ್ಯಾಭ್ಯಾಸಕ್ಕಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದರು. ಆದರೆ ಇಂದು ಮಂಗಳೂರು-ಬೆಂಗಳೂರಿನಂತಹ ದೊಡ್ಡ ನಗರಗಳಲ್ಲಿರುವವರು ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ನಮ್ಮ ಶಾಲಾ-ಕಾಲೇಜುಗಳನ್ನು ಆಯ್ಕೆ ಮಾಡಿಕೊಂಡಿರುವುದು ನಮ್ಮ ಸಂಸ್ಥೆಗಳು ಶಿಕ್ಷಣ ಕ್ಷೇತ್ರದಲ್ಲಿ ಗಳಿಸಿರುವ ನಂಬಿಕೆ ಹಾಗೂ ಖ್ಯಾತಿಯನ್ನು ಪ್ರತಿಬಿಂಬಿಸುತ್ತದೆ” ಎಂದು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹೇಳಿದರು.

ಅವರು ಜೂ 17ರಂದು ಎಕ್ಸೆಲ್ ಟೆಕ್ನೊ ಸದಕೂಲ್ ನ ದೀಕ್ಷಾರಾಂಭ 2026 ರ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಎಕ್ಸೆಲ್ ಟೆಕ್ನೊ ಶಾಲೆಯ ಪ್ರಾಂಶುಪಾಲರಾದ ಸುಮಿತ್ರಾ ಅವರು ಮಾತನಾಡಿ ಉತ್ತಮ ಧ್ಯೇಯದೊಂದಿಗೆ ಬೆಳೆಯುತ್ತಿರುವ ನಮ್ಮ ಸಂಸ್ಥೆ ತಮ್ಮ ಮಕ್ಕಳಿಗೆ ಸ್ಪರ್ಧಾತ್ಮಕ ಜಗತ್ತಿಗೆ ಹೊಂದಿಕೊಳ್ಳಲು ನೆರವಾಗುವ ಎಲ್ಲಾ ಕೌಶಲ್ಯಗಳನ್ನು ನೀಡುತ್ತದೆ ಎಂದರು.

ಎಕ್ಸೆಲ್ ಟೆಕ್ನೊ ಸ್ಕೂಲ್ ಸಂಯೋಜಕರಾದ ಲೀನಾ ಫ್ಲೋರಿನ್ ಪಿಂಟೋ ಅವರು ಮಾತನಾಡಿ “ಶಿಸ್ತು ಘನತೆಯ ಅಡಿಪಾಯ ಅದು ಮನೆಯಲ್ಲಿ ಆರಂಭವಾಗಿ ಶಾಲೆಯಲ್ಲಿ ಮುಂದುವರಿಯಬೇಕು. ಶಿಸ್ತನ್ನು ಶಿಕ್ಷೆಯೆಂದು ಪರಿಗಣಿಸುವ ಬದಲು ಅದು ಜೀವನ ವಿಧಾನವಾಗಬೇಕು. ಈ ನಿಟ್ಟಿನಲ್ಲಿ ಮಕ್ಕಳಲ್ಲಿ ಶಿಸ್ತನ್ನು ಮೂಡಿಸಲು ನಾವು ಕೆಲವು ಸರಳ ಹಾಗೂ ವಿದ್ಯಾರ್ಥಿಸ್ನೇಹಿ ನಿಯಮಗಳನ್ನು ಪರಿಚಯಿಸುತ್ತಿದ್ದೇವೆ. ಈ ನಿಯಮಾಭ್ಯಾಸಗಳು ಮುಂದೆ ಮಕ್ಕಳ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವಲ್ಲಿ ನೆರವಾಗುತ್ತವೆ” ಎಂದರು.

ಶಿಕ್ಷಕಿ ಜೊಸ್ಲೀಟಾ ಲೋಬೋ ಕಾರ್ಯಕ್ರಮ ನಿರೂಪಿಸಿದರು. ವಿಲ್ಮಾ ಮೋನಿಸ್ ಸ್ವಾಗತಿಸಿದರು. ಪ್ರೇಮಾ ವಂದಿಸಿದರು. ಗೀತಾ ಉಜ್ವಲ್ ಶಾಲಾ ವಾಹನ ಸುರಕ್ಷತೆಯ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು. ಶಿಕ್ಷಕಿಯರಾದ ಚೇತನಾ, ಪೂರ್ಣಿಮಾ, ಲವೀನಾ ಸಹಕರಿಸಿದರು.

Related posts

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಇಳಂತಿಲ: ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಸಾವ್ಯ: ಶುಭೋದಯ ಯುವಕ ಮಂಡಲದಿಂದ ಸಾಮೂಹಿಕ ಶ್ರೀ ಶನೈಶ್ವರ ಪೂಜೆ

Suddi Udaya

ಮಾಲಾಡಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya
error: Content is protected !!