August 10, 2026
ಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ: ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು: ವಾರೀಸುದಾರರ ಪತ್ತೆಗೆ ಮನವಿ

ಬೆಳ್ತಂಗಡಿ: ಧರ್ಮಸ್ಥಳದ ಅಣ್ಣಪ್ಪ ಬೆಟ್ಟದ ಬಳಿ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಯಾವುದೋ ಖಾಯಿಲೆಯಿಂದ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಜೂ.25ರಂದು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೃತರ ವಯಸ್ಸು ಸುಮಾರು 60-65 ವರ್ಷ ಆಗಿದ್ದು, ಎತ್ತರ 5.3 ಅಡಿ, ಸಪೂರ ಶರೀರ, ಎಣ್ಣೆಕಪ್ಪು ಮೈಬಣ್ಣ, ಕೋಲುಮುಖ, ಅಗಲ ಹಣೆ, ಮುಖದಲ್ಲಿ ಬಿಳಿ ನೆರೆತ ಗಡ್ಡ-ಮೀಸೆ, ತಲೆಯಲ್ಲಿ ಬಿಳಿ ನೆರೆತ ಕೂದಲು, ಹಣೆಯ ಎಡಭಾಗ ಎಡಕಣ್ಣಿನ ಮೇಲ್ಬಾಗದಲ್ಲಿ ಕಪ್ಪು ಎಳ್ಳು ಮಚ್ಚೆ ಗುರುತು ಇದ್ದು, ಮೃತದೇಹದ ಮೈಮೇಲೆ ಆಸ್ಪತ್ರೆಯ ಬಾಬ್ತು ಡೈಫರ್ ಮತ್ತು ಸೊಂಟದಲ್ಲಿ ಕೆಂಪು ಉಡಿದಾರ-1 ನ್ನು ಧರಿಸಿರುತ್ತಾರೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ 08256 277253, E-Mail ID [email protected] PSI DHARMASTHALA: 7795424204, 8277986449. CPI BELTHANGADY: 9480805336, Dist Control: 0824-2220500, ಗೆ ಸಂಪರ್ಕಿಸಬೇಕಾಗಿ ಈ ಮೂಲಕ ಕೋರಿಕೆ.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಗ್ರಾಮ ಸಮಿತಿ ಉಜಿರೆ ವಾರ್ಷಿಕ ಮಹಾಸಭೆ

Suddi Udaya

ಜನಪದ ಗೀತಗಾಯನ ಸ್ಪರ್ಧೆ: ವಾಣಿ ಕಾಲೇಜಿನ ರೇಂಜರ್ಸ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣದ ಪೂಜಾ ಸಮಾರಂಭ: ಡಾ.ಹೆಗ್ಗಡೆ ಕುಟುಂಬಸ್ಥರು, ಸಿರಿ ಸಂಸ್ಥೆಯ ನಿರ್ದೇಶಕರುಗಳು ಭಾಗಿ

Suddi Udaya

ಕೂಕ್ರಬೆಟ್ಟು ಶಾಲೆಯಲ್ಲಿ ನಾರಾವಿ ವಲಯ ಮಟ್ಟದ ವಾಲಿಬಾಲ್‌ ಪಂದ್ಯಾಟ: ಸಾವ್ಯ, ಅಂಡಿಂಜೆ ಶಾಲಾ ಮಕ್ಕಳು ಪ್ರಥಮ

Suddi Udaya
error: Content is protected !!