August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಸಮಾರಂಭವು ವಿಜೃಂಭಣೆಯಿಂದ ನಡೆಯಿತು.

ಮುಖ್ಯ ಅತಿಥಿಯಾಗಿ ಕಾರ್ಯನಿರತ ಪತ್ರಕರ್ತರ ಸಂಘ ಬೆಳ್ತಂಗಡಿ ಅಧ್ಯಕ್ಷರು ಹಾಗೂ ಸುದ್ದಿ ಉದಯ ವಾರಪತ್ರಿಕೆಯ ನಿರ್ದೇಶಕ ತುಕಾರಾಂ ಬಿ. ಅವರು ಭಾಗವಹಿಸಿ ವಿದ್ಯಾರ್ಥಿ ಮಂತ್ರಿಮಂಡಲದ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಜವಾಬ್ದಾರಿ ಮತ್ತು ಶಿಸ್ತುಬದ್ಧ ಕಾರ್ಯನಿರ್ವಹಣೆಯ ಮಹತ್ವವನ್ನು ವಿವರಿಸಿ ನೂತನ ಮಂತ್ರಿಮಂಡಲಕ್ಕೆ ಶುಭ ಹಾರೈಸಿದರು.

ಈ ಸಾಲಿನ ವಿದ್ಯಾರ್ಥಿ ಸಂಸತ್ತಿಗೆ ಸಂಜನಾ ಎಸ್. ಶಾಲಾ ನಾಯಕಿಯಾಗಿ ಹಾಗೂ ಶ್ರುತ ಶೆಟ್ಟಿ ಉಪನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಜಸ್ವಿತಾ ಕ್ರೀಡಾ ಮಂತ್ರಿಯಾಗಿ, ದಿಶಾ ಡಿ.ಎ. ಶಿಕ್ಷಣ ಮಂತ್ರಿಯಾಗಿ, ಸಾತ್ವಿಕ್ ಆರೋಗ್ಯ ಮಂತ್ರಿಯಾಗಿ, ವಿನ್ಯಾಸ್ ಶಿಸ್ತು ಮಂತ್ರಿಯಾಗಿ ಹಾಗೂ ದಿಶಾ ಕಲೆ ಮತ್ತು ಸಾಂಸ್ಕೃತಿಕ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.

ಮತದಾರರ ಸಾಕ್ಷರತಾ ಸಂಘದ ಸಂಯೋಜಕ ಶಿಕ್ಷಕಿಯಾದ ಶ್ರೀಮತಿ ಕಸ್ತೂರಿ ಅವರ ನೇತೃತ್ವದಲ್ಲಿ ನಡೆದ ಈ ಮಂತ್ರಿಮಂಡಲ ಉದ್ಘಾಟನಾ ಸಮಾರಂಭದಲ್ಲಿ ಶಿಕ್ಷಕಿ ನೀತಾ ಕೆ ಎಸ್, ಶಿಕ್ಷಕ ಮುರಳಿ ಪಿ ಹಾಗೂ ಶಾಲೆಯ ಎಲ್ಲಾ ಶಿಕ್ಷಕರ ಸಹಕಾರದೊಂದಿಗೆ ಯಶಸ್ವಿಯಾಗಿ ನೆರವೇರಿತು.
ಕಾರ್ಯಕ್ರಮದಲ್ಲಿ ಮೇಶುಕ ನಿರೂಪಣೆ ನಡೆಸಿದರು. ಸ್ತವ್ಯ ಶೆಟ್ಟಿ ಸ್ವಾಗತ ಭಾಷಣ ಮಾಡಿದ್ದು, ಆರಾಧ್ಯ ಶೆಣೈ ವಂದನಾರ್ಪಣೆ ಸಲ್ಲಿಸಿದರು. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಯ ಸಕ್ರಿಯ ಭಾಗವಹಿಸುವಿಕೆಯಿಂದ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿತು.

Related posts

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

Suddi Udaya

ಧರ್ಮಸ್ಥಳ: ಕೇಶವ ಗಾಣಿಗ ನಿಧನ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

Suddi Udaya

ನಡ ಗ್ರಾ.ಪಂ. ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಿಯವರೆಗೆ ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya

ಮದ್ದಡ್ಕ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದ ಕಾರು

Suddi Udaya
error: Content is protected !!