ನಡ : “ವಿದ್ಯಾರ್ಥಿಗಳು ಭವಿಷ್ಯದ ಮತದಾರರು. ಅವರು ಆಸಕ್ತಿಯಿಂದ ಮತ್ತು ಜವಾಬ್ದಾರಿಯಿಂದ ಚುನಾವಣೆಯಲ್ಲಿ ಭಾಗವಹಿಸಬೇಕು. ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಬೇಕು. ಕೀಳರಿಮೆಗಿಂತ ದೊಡ್ಡ ಶತ್ರು ಯಾರೂ ಇಲ್ಲ. ಎಲ್ಲರ ಜೊತೆಗೆ ಸೌಹಾರ್ದ ಸಂಬಂಧ ಇದ್ದಾಗ ಬದುಕಿನಲ್ಲಿ ಸಾಧನೆ ಸಾಧ್ಯವಾಗುತ್ತದೆ.”ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ದಿವ್ಯ ಕೆ ಇವರು ಸರ್ಕಾರಿ ಪದವಿ ಪೂರ್ವ ಕಾಲೇಜು ನಡ ಇಲ್ಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಸಂಸ್ಥೆಯ ಪ್ರಾಂಶುಪಾಲರಾದ ಲಿಲ್ಲಿ ಪಿವಿ ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು.
ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಮಾಜಿ ಪ್ರಾಂಶುಪಾಲರಾದ ಚಂದ್ರಶೇಖರ್ ಹಾಗೂ ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೋಹನಗೌಡ ಉಪಸ್ಥಿತರಿದ್ದರು. ಉಪನ್ಯಾಸಕರುಗಳಾದ ಸುಕನ್ಯ ನಿರೂಪಿಸಿದ ಕಾರ್ಯಕ್ರಮದಲ್ಲಿ ವಸಂತಿ ಪಿ ಸ್ವಾಗತಿಸಿ, ಶಿಲ್ಪಾ ಡಿ ಪ್ರಸ್ತಾವನೆಗೈದು, ಪವಿತ್ರ ವಂದಿಸಿದರು. ಕಾಲೇಜು ವಿದ್ಯಾರ್ಥಿ ನಾಯಕನಾಗಿ ಚರಣ್ ಹಾಗೂ ಕಾಲೇಜು ಕಾರ್ಯದರ್ಶಿಯಾಗಿ ಸ್ಪೂರ್ತಿ ಆರ್ ಆಯ್ಕೆಯಾದರು.












