23.4 C
ಪುತ್ತೂರು, ಬೆಳ್ತಂಗಡಿ
June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಎಂ.ಎನ್.ಅನುಚೇತ್ ನೇಮಕ

ಬೆಳ್ತಂಗಡಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.
ಅನುಚೇತ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಜತೆಗೆ ಯುವಜನ ಮತ್ತು ಕ್ರೀಡಾ ಇಲಾಖೆ ಆಯುಕ್ತರ ಹುದ್ದೆಯನ್ನು ಹೆಚ್ಚುವರಿಯಾಗಿ ಅವರಿಗೆ ನೀಡಲಾಗಿದೆ. 2009ನೇ ಸಾಲಿನ ಐಪಿಎಸ್ ಅಧಿಕಾರಿಯಾಗಿರುವ ಎಂ.ಎನ್. ಅನುಚೇತ್ ಅವರು ವೃತ್ತಿ ಜೀವನದಲ್ಲಿ ಸೂಕ್ಷ್ಮ ಮತ್ತು ಗಂಭೀರ ಪ್ರಕರಣಗಳ ತನಿಖೆಯಿಂದ ಹೆಸರುವಾಸಿಯಾಗಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರ ಸಂಬಂಧ ಕನ್ನಡಪರ ಸಂಘಟನೆಗಳು ಬೆಂಗಳೂರಿನಲ್ಲಿ ಗಲಾಟೆ ಮತ್ತು ಆಸ್ತಿಪಾಸ್ತಿಗೆ ಹಾನಿ ಉಂಟು ಮಾಡಿದ್ದ ಮಾರನೇ ದಿನವೇ ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿಯಾಗಿ ಎಂ.ಎನ್. ಅನುಚೇತ್ ಅವರನ್ನು ಸರ್ಕಾರ ನಿಯೋಜನೆ ಮಾಡಿತ್ತು.

Related posts

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಸಂಸತ್ತು ಚುನಾವಣೆ

Suddi Udaya

ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ, ವಿ.ಹಿಂ.ಪ. ಭಜರಂಗದಳ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

Suddi Udaya

ವಲಯ ಮಟ್ಟದ ಕ್ರೀಡಾಕೂಟ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತರಗತಿ ಕೊಠಡಿಗಳ ಸೂಚನಾ ಫಲಕದ ನಾವಿನ್ಯತೆ ಕಾರ್ಯಾಗಾರ

Suddi Udaya
error: Content is protected !!