August 10, 2026
ತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಸತ್ತು ಚುನಾವಣೆ

ಸವಣಾಲು: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇಲ್ಲಿನ 2026 – 27 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ಪದಾಧಿಕಾರಿಗಳ ಆಯ್ಕೆ ಮಾಡಲು ಜೂನ್ 23ರಂದು ಚುನಾವಣೆಯನ್ನು ನಡೆಸಲಾಯಿತು.

ಎಲ್ಲಾ ವಿದ್ಯಾರ್ಥಿಗಳ ಮತದಾನ ಪ್ರಕ್ರಿಯೆಯು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮಾದರಿಯಲ್ಲಿ ಮೊಬೈಲ್ ನಲ್ಲಿ EVM ಇದರ ಮೂಲಕ ನೆರವೇರಿತು. ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶದೊಂದಿಗೆ ಮತದಾನದ ಕಾರ್ಯ ಚಟುವಟಿಕೆಗಳನ್ನು ಆಧುನಿಕ ಮೊಬೈಲ್ ತಂತ್ರಜ್ಞಾನದ ಮೂಲಕ ಮಾಡಲಾಯಿತು. ಮತದಾನದ ಎಣಿಕೆಯನ್ನು ಮಾಡಿ ಫಲಿತಾಂಶ ಘೋಷಣೆಯನ್ನು ಮಾಡಲಾಯಿತು.

ಶಾಲಾ ವಿದ್ಯಾರ್ಥಿ ಸಂಘದ ನಾಯಕನಾಗಿ ಬಿ. ತೇಜಸ್ ಭಟ್, ಉಪನಾಯಕಿಯಾಗಿ ಫಾತಿಮಾ ಅಸ್ನ ಆಯ್ಕೆಯಾದರು. ಗೃಹ ಮಂತ್ರಿಯಾಗಿ ಹೃತಿಕ್. ಆರ್ ಮತ್ತು ಮಹಮ್ಮದ್ ಶೈಫ್, ಆರೋಗ್ಯ ಮತ್ತು ಸ್ವಚ್ಛತಾ ಮಂತ್ರಿಯಾಗಿ ಸುಹ ಮತ್ತು ಚಿಂತನ್, ಗ್ರಂಥಾಲಯ ಮತ್ತು ಶಿಕ್ಷಣ ಮಂತ್ರಿಯಾಗಿ ಗೌತಮಿ ಮತ್ತು ಶಿಫಾ, ನೀರಾವರಿ ಮತ್ತು ತೋಟಗಾರಿಕಾ ಕೃಷಿಮಂತ್ರಿಯಾಗಿ ವಂಶಿಕ್ ಮತ್ತು ಚೇತನ್, ಕ್ರೀಡಾ ಮತ್ತು ಸಾಂಸ್ಕೃತಿಕ ಮಂತ್ರಿಯಾಗಿ ಆಯಿಷಾ ಮತ್ತು ನಿಹಾಲ್ ರವರನ್ನು ಆಯ್ಕೆ ಮಾಡಲಾಯಿತು.
ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸಲು ಮತ್ತು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಬೇಕು ಎಂಬುದಾಗಿ ಶಿಕ್ಷಕರು ಮನವರಿಕೆ ಮಾಡಿ ವಿಜೇತರನ್ನು ಅಭಿನಂದಿಸಿದರು.

Related posts

ಲೋಕಸಭಾ ಮಹಾಚುನಾವಣೆ ಹಿನ್ನೆಲೆ: ಕಾಜೂರು ಮಖಾಂ ಶರೀಫ್ ಉರೂಸ್ ಮುಂದಕ್ಕೆ; ಮೇ. 3 – 12 ದಿನಾಂಕ ನಿಗದಿ

Suddi Udaya

ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಕೆಳಗೆ ಬಿದ್ದ ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು: ಗೇರುಕಟ್ಟೆ ರೇಷ್ಮೆ ರೋಡ್ ಬಳಿ ನಡೆದ ಘಟನೆ

Suddi Udaya

ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ವಿದ್ಯಾರ್ಥಿ ಚಳವಳಿಯ ಮೇಲೆ ನಡೆದ ಪೈಶಾಚಿಕ ದಾಳಿ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಆಡಳಿತಕ್ಕೆ ಸಾಕ್ಷಿ: ಶೇಖರ ಎಲ್

Suddi Udaya

ಕರಾಟೆ ಚಾಂಪಿಯನ್ ಶಿಪ್: ಸೇಕ್ರೆಡ್ ಹಾರ್ಟ್ ಆಂ. ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬಿ. ಪ್ರಮೋದ್ ಕುಮಾರ್ ನೂಜೋಡಿ ನಿಧನ

Suddi Udaya
error: Content is protected !!