June 26, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾರ್ವಜನಿಕ ರಸ್ತೆಯ ದುರ್ಬಳಕೆ ವಿರುದ್ಧ ಎಸ್.ಡಿ.ಪಿ.ಐ. ದೂರು

ಬೆಳ್ತಂಗಡಿ: ಲಾಯಿಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಆದರ್ಶನಗರದಲ್ಲಿ ಸಾರ್ವಜನಿಕ ರಸ್ತೆಯನ್ನು ಖಾಸಗಿ ಉದ್ದೇಶಗಳಿಗೆ ದುರ್ಬಳಕೆ ಮಾಡಿಕೊಂಡು ಸಾರ್ವಜನಿಕರಿಗೆ ಸಂಚಾರ ತೊಂದರೆ ಉಂಟು ಮಾಡುತ್ತಿರುವ ಕುರಿತು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಲಾಯಿಲಾ ಬ್ರಾಂಚ್ ಸಮಿತಿಯ ವತಿಯಿಂದ ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಸಾರ್ವಜನಿಕ ರಸ್ತೆಯನ್ನು ಅತಿಕ್ರಮಿಸಿ ಹಾಗೂ ದುರ್ಬಳಕೆ ಮಾಡುತ್ತಿರುವುದರಿಂದ ಸ್ಥಳೀಯ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಸಮಸ್ಯೆಗೆ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಗ್ರಾಮಸ್ಥರೊಂದಿಗೆ ಸೇರಿ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕುವ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.ಈ ಸಂದರ್ಭದಲ್ಲಿ ಲಾಯಿಲಾ ಬ್ರಾಂಚ್ ಅಧ್ಯಕ್ಷರಾದ ಅಸಿಫ್, ಲಾಯಿಲಾ ಬ್ಲಾಕ್ ಅಧ್ಯಕ್ಷರಾದ ಸಲೀಂ ಲಾಯಿಲಾ, ಕಾರ್ಯದರ್ಶಿ ಸಾದಿಕ್ ಲಾಯಿಲಾ ಹಾಗೂ ಸ್ಥಳೀಯರಾದ ಅಸಿಫ್, ಹಾರಿಶ್ ಮತ್ತು ಇರ್ಫಾನ್ ಉಪಸ್ಥಿತರಿದ್ದರು.

Related posts

ಬೆಳಾಲು: ಶ್ರೀಮತಿ ಸುಲೋಚನಾ ಎಸ್. ಕೆರ್ಮುಣ್ಣಾಯ ನಿಧನ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಹತ್ಯಡ್ಕ ಸಹಕಾರಿ ಸಂಘದ ಚುನಾವಣೆ :ಸಹಕಾರ ಭಾರತೀಯ ಅಭ್ಯರ್ಥಿಗಳ ‘ಮಹಾಭಿಯಾನ’ ಪ್ರಚಾರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಚಾಲನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಉದ್ಯಮಿ ಕಿರಣಚಂದ್ರ ಪುಷ್ಪಗಿರಿ ಭೇಟಿ

Suddi Udaya

ಜೂ.27 : ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ಹಾಗೂ ತೋಟದ ಸಮಗ್ರ ನಿರ್ವಹಣೆ ಕುರಿತು ಸಾಂಸ್ಥಿಕ ತರಬೇತಿ

Suddi Udaya
error: Content is protected !!