23.4 C
ಪುತ್ತೂರು, ಬೆಳ್ತಂಗಡಿ
June 26, 2026
ತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನಲ್ಲಿ ಭವಿಷ್ಯಕ್ಕಾಗಿ ಉಳಿತಾಯ – ಉಪನ್ಯಾಸ ಕಾರ್ಯಕ್ರಮ

ಉಜಿರೆ: ಶ್ರೀ ಧ. ಮಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ ಭವಿಷ್ಯಕ್ಕಾಗಿ ಉಳಿತಾಯ ಎಂಬ ಕುರಿತು ಉಪನ್ಯಾಸ ಕಾರ್ಯಕ್ರಮವು ಇಂದು (ಜೂ.25) ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರು ವಿಭಾಗದ ಅಂಚೆ ಕಛೇರಿಯ ಮಾರ್ಕೆಟ್ ಎಕ್ಸಿಕ್ಯೂಟಿವ್ ಗುರುಪ್ರಸಾದ್ ಕೆ ಎಸ್ ಮಾತನಾಡಿದರು.

ಭಾರತೀಯ ಅಂಚೆ ಕಚೇರಿಯು ಒಂದು ಕಡೆಯಿಂದ ಇನ್ನೊಂದು ಕಡೆಗೆ ಕೇವಲ ಪತ್ರಗಳನ್ನು ತಲುಪಿಸುವುದಷ್ಟೇ ಅಲ್ಲದೆ, ಹಣಕಾಸು, ಉಳಿತಾಯ ಯೋಜನೆಗಳು, ಆಧಾರ್ ನವೀಕರಣ, ವಿಮೆ, ಪಾರ್ಸೆಲ್ ಸಾಗಣೆ ಇನ್ನೂ ಹಲವಾರು ಸೇವೆಗಳನ್ನು ಒದಗಿಸುವ ಕೇಂದ್ರ ಸರ್ಕಾರದ ಸಂಸ್ಥೆಯಾಗಿದೆ ಹಾಗೂ ಜನರ ಆರ್ಥಿಕ ಭದ್ರತೆ, ಸಂವಹನ ಮತ್ತು ಸೇವೆಗಳ ಕೇಂದ್ರವಾಗಿ ಕಾರ್ಯನಿರ್ವಹಿಸುವುದರೊಂದಿಗೆ ಸಮಾಜದ ಅಭಿವೃದ್ಧಿಗೆ ಮಹತ್ವವಾದ ಕೊಡುಗೆಗಳನ್ನು ನೀಡುತ್ತಿವೆ. ಹಾಗಾಗಿ ಅಂಚೆ ಕಚೇರಿಯಲ್ಲಿರುವ ಸೇವಾ ಸೌಲಭ್ಯಗಳನ್ನು ಬಳಸಿಕೊಳ್ಳಿ. ಭವಿಷ್ಯಕ್ಕಾಗಿ ಉಳಿತಾಯ ಮಾಡುವುದರಿಂದ ನಮ್ಮ ಜೀವನ ಸುಖಮಯವಾಗಿರುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ ಸಂತೋಷ್ ಆಲ್ಬರ್ಟ್ ಸಲ್ಡಾನ ವಹಿಸಿ ಅಂಚೆ ಕಚೇರಿಯ ಸೌಲಭ್ಯಗಳು ನಮ್ಮ ಬದುಕಿಗೆ ಸಹಕಾರಿ. ಹಾಗಾಗಿ ಈ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಳ್ಳಿ ಮತ್ತು ಇತರರಿಗೆ ಈ ಮಾಹಿತಿಯನ್ನು ಹಂಚಿರಿ ಎಂದು ಹೇಳಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಿದ್ಯಾರ್ಥಿ ನಾಯಕಿಯರಾದ ಶ್ರವಣ ಮಹಾಪುರುಷ ಮತ್ತು ರಂಝೀನಾ ಉಪಸ್ಥಿತರಿದ್ದರು.
ಪ್ರಶಿಕ್ಷಣಾರ್ಥಿಗಳಾದ ವಿನಿಶಾ ಮತ್ತು ಬಳಗ ಪ್ರಾರ್ಥಿಸಿ, ರಮೇಶ ಸ್ವಾಗತಿಸಿ, ಶೀತಲ್ ಅತಿಥಿ ಪರಿಚಯಿಸಿ, ಚೈತ್ರಾ ಪಿ ವಂದಿಸಿ, ಹೇಮಲತಾ ಕಾರ್ಯಕ್ರಮ ನಿರೂಪಿಸಿದರು.

Related posts

ಮಚ್ಚಿನ ಗ್ರಾಮ ಪಂಚಾಯತ್ ಮಟ್ಟದ 25ನೇ ಜನಸ್ಪಂದನ ಸಭೆ: ನಾಡ ಕಚೇರಿಯ ಬೇಡಿಕೆ – ಚಿರತೆ ಕಾಟದಿಂದ ಜನರಲ್ಲಿ ಆತಂಕ

Suddi Udaya

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯ ಅವರಿಗೆ ಬೀಳ್ಕೊಡುಗೆ ಸಮಾರಂಭ: ಶಾಲೆಯ ಪ್ರಗತಿಗೆ ಶಿಕ್ಷಕಿ ವಿಜಯರವರ ಕೊಡುಗೆ ಅಪಾರ: ಮೋಹನ್ ಕುಮಾರ್

Suddi Udaya

ಕಳೆಂಜ: ಶಿಬರಾಜೆಯಲ್ಲಿ ಒಂಟಿಸಲಗ ದಾಳಿ : ಅಪಾರ ಕೃಷಿ ನಾಶ

Suddi Udaya

ಕಳೆಂಜ: ಭಾರಿ ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ

Suddi Udaya

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya
error: Content is protected !!