August 10, 2026
ತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನಲ್ಲಿ ಭವಿಷ್ಯಕ್ಕಾಗಿ ಉಳಿತಾಯ – ಉಪನ್ಯಾಸ ಕಾರ್ಯಕ್ರಮ

ಉಜಿರೆ: ಶ್ರೀ ಧ. ಮಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ ಭವಿಷ್ಯಕ್ಕಾಗಿ ಉಳಿತಾಯ ಎಂಬ ಕುರಿತು ಉಪನ್ಯಾಸ ಕಾರ್ಯಕ್ರಮವು ಇಂದು (ಜೂ.25) ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರು ವಿಭಾಗದ ಅಂಚೆ ಕಛೇರಿಯ ಮಾರ್ಕೆಟ್ ಎಕ್ಸಿಕ್ಯೂಟಿವ್ ಗುರುಪ್ರಸಾದ್ ಕೆ ಎಸ್ ಮಾತನಾಡಿದರು.

ಭಾರತೀಯ ಅಂಚೆ ಕಚೇರಿಯು ಒಂದು ಕಡೆಯಿಂದ ಇನ್ನೊಂದು ಕಡೆಗೆ ಕೇವಲ ಪತ್ರಗಳನ್ನು ತಲುಪಿಸುವುದಷ್ಟೇ ಅಲ್ಲದೆ, ಹಣಕಾಸು, ಉಳಿತಾಯ ಯೋಜನೆಗಳು, ಆಧಾರ್ ನವೀಕರಣ, ವಿಮೆ, ಪಾರ್ಸೆಲ್ ಸಾಗಣೆ ಇನ್ನೂ ಹಲವಾರು ಸೇವೆಗಳನ್ನು ಒದಗಿಸುವ ಕೇಂದ್ರ ಸರ್ಕಾರದ ಸಂಸ್ಥೆಯಾಗಿದೆ ಹಾಗೂ ಜನರ ಆರ್ಥಿಕ ಭದ್ರತೆ, ಸಂವಹನ ಮತ್ತು ಸೇವೆಗಳ ಕೇಂದ್ರವಾಗಿ ಕಾರ್ಯನಿರ್ವಹಿಸುವುದರೊಂದಿಗೆ ಸಮಾಜದ ಅಭಿವೃದ್ಧಿಗೆ ಮಹತ್ವವಾದ ಕೊಡುಗೆಗಳನ್ನು ನೀಡುತ್ತಿವೆ. ಹಾಗಾಗಿ ಅಂಚೆ ಕಚೇರಿಯಲ್ಲಿರುವ ಸೇವಾ ಸೌಲಭ್ಯಗಳನ್ನು ಬಳಸಿಕೊಳ್ಳಿ. ಭವಿಷ್ಯಕ್ಕಾಗಿ ಉಳಿತಾಯ ಮಾಡುವುದರಿಂದ ನಮ್ಮ ಜೀವನ ಸುಖಮಯವಾಗಿರುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ ಸಂತೋಷ್ ಆಲ್ಬರ್ಟ್ ಸಲ್ಡಾನ ವಹಿಸಿ ಅಂಚೆ ಕಚೇರಿಯ ಸೌಲಭ್ಯಗಳು ನಮ್ಮ ಬದುಕಿಗೆ ಸಹಕಾರಿ. ಹಾಗಾಗಿ ಈ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಳ್ಳಿ ಮತ್ತು ಇತರರಿಗೆ ಈ ಮಾಹಿತಿಯನ್ನು ಹಂಚಿರಿ ಎಂದು ಹೇಳಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಿದ್ಯಾರ್ಥಿ ನಾಯಕಿಯರಾದ ಶ್ರವಣ ಮಹಾಪುರುಷ ಮತ್ತು ರಂಝೀನಾ ಉಪಸ್ಥಿತರಿದ್ದರು.
ಪ್ರಶಿಕ್ಷಣಾರ್ಥಿಗಳಾದ ವಿನಿಶಾ ಮತ್ತು ಬಳಗ ಪ್ರಾರ್ಥಿಸಿ, ರಮೇಶ ಸ್ವಾಗತಿಸಿ, ಶೀತಲ್ ಅತಿಥಿ ಪರಿಚಯಿಸಿ, ಚೈತ್ರಾ ಪಿ ವಂದಿಸಿ, ಹೇಮಲತಾ ಕಾರ್ಯಕ್ರಮ ನಿರೂಪಿಸಿದರು.

Related posts

ಪಜಿರಡ್ಕ: ನೀರುಪಾಲಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

Suddi Udaya

ಗುಂಡೂರಿ ಹಾಲು ಉ.ಸ. ಸಂಘಕ್ಕೆ ತಾಲೂಕಿನ ದ್ವಿತೀಯ ಉತ್ತಮ ಸಂಘ ಪ್ರಶಸ್ತಿ

Suddi Udaya

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya

ವೈಬ್ರೆಂಟ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳಾಲು ಡಿ.ಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ವಲಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಕಾರ್ಯಕ್ರಮ

Suddi Udaya

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

Suddi Udaya
error: Content is protected !!