23.4 C
ಪುತ್ತೂರು, ಬೆಳ್ತಂಗಡಿ
June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸಂಭ್ರಮ ಶನಿವಾರ’ ಆಚರಣೆ

ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳ ಒತ್ತಡವಿಲ್ಲದೆ ಅನುಭವಾತ್ಮಕ, ಸೃಜನಾತ್ಮಕ, ಹಾಗೂ ಜೀವನ ಕೌಶಲ್ಯ ಆಧಾರಿತ ಕಲಿಕೆಯನ್ನು ಒದಗಿಸುವ ಸಲುವಾಗಿ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಸಂಭ್ರಮ ಶನಿವಾರ’ ಕಾರ್ಯಕ್ರಮವನ್ನು ಎಸ್‌ಡಿಎಂ ಅನುದಾನಿತ ಹಿ.ಪ್ರಾ ಶಾಲೆ ಉಜಿರೆಯಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವು ಮಕ್ಕಳ ಶಾಲೆಯ ಬ್ಯಾಗ್ ನ ಭಾರವನ್ನು ಕಡಿಮೆ ಮಾಡುವುದು, ಆಟ, ಕಲೆ, ಸಂಗೀತ, ನಾಟಕ, ವಿಜ್ಞಾನ ಇಂತಹ ವಿಷಯಗಳನ್ನು ಚಟುವಟಿಕೆಗಳ ಮೂಲಕ ಕಲಿಸುವುದು, ಮಕ್ಕಳಲ್ಲಿ ಜೀವನ ಕೌಶಲ್ಯ ಮತ್ತು ಸಾಮಾಜಿಕ ಜಾಗೃತಿಯನ್ನು ಬೆಳೆಸುವುದು ಹೀಗೆ ಮುಂತಾದ ಉದ್ದೇಶಗಳನ್ನು ಹೊಂದಿದೆ.
ಕಾರ್ಯಕ್ರಮದ ಪ್ರಯುಕ್ತ ವಿಶೇಷ ಚೇತನ ವುಳ್ಳ ವ್ಯಕ್ತಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ಪ್ರಸ್ತುತ ಗ್ರಾಮೀಣ ವಿಶೇಷ ಚೇತನ ಅಭ್ಯರ್ಥಿಗಳ ಪುನರ್ವಸತಿ ಕಾರ್ಯಕರ್ತರಾಗಿರುವ ವಿಪುಲ ಕುಮಾರ್ ಮಾತನಾಡಿ “ವಿಶೇಷ ಚೇತನ ಮಕ್ಕಳಿಗೆ ಹೆಚ್ಚಿನ ಅವಕಾಶದ ಅಗತ್ಯತೆ ಇದೆ, ಎಲ್ಲ ಕ್ಷೇತ್ರಗಳಲ್ಲೂ ವಿಶೇಷ ಚೇತನರು ಗುರುತಿಸಿಕೊಂಡಿದ್ದಾರೆ” ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ವಹಿಸಿದ್ದರು. ವಿಶೇಷ ಚೇತನರಿಗೆ ಸಂಬಂಧಿಸಿದಂತೆ ವಿವಿಧ ಬಿತ್ತಿ ಪತ್ರ ಅನಾವರಣಗೊಳಿಸಲಾಯಿತು. ಸಹ ಶಿಕ್ಷಕಿ ಗೀತಾ ಸ್ವಾಗತಿಸಿದರು, ಶಾಲಾ ಸಹ ಶಿಕ್ಷಕಿ ರೇವತಿ ವಂದನೆಗೈದರು, ಶಾಲಾ ಸಹ ಶಿಕ್ಷಕಿ ಗೀತಾ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya

ತಣ್ಣೀರುಪಂಥ : ಬೋಳ್ನಡ್ಕ ಭಾಗದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರವರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಮಡಂತ್ಯಾರು ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಅಭಿವೃದ್ಧಿ ಕಾಮಗಾರಿಗೆ ತಡೆ ಆರೋಪ: ಇಳಂತಿಲದಲ್ಲಿ ಬೃಹತ್ ಪ್ರತಿಭಟನೆ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು ಇನ್ನೂ ಪತ್ತೆಯಾಗದ ಕಳೇಬರ ಕಾರ್ಯಾಚರಣೆಗೆ ಶ್ವಾನ ದಳ ಎಂಟ್ರಿ

Suddi Udaya

ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದು ರಸ್ತೆ ಸಂಪರ್ಕ ಕಡಿತ ಅಡಿಕೆ ಮರದ ತಾತ್ಕಾಲಿಕ ಸೇತುವೆ ನಿರ್ಮಾಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಬಿಜೆಪಿ ಕಾರ್ಯಕರ್ತರು

Suddi Udaya
error: Content is protected !!