August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ

ಬೆಳ್ತಂಗಡಿ: ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆ ಹಾಗೂ ಒಂದು ವಾರಗಳ ಕಾಲ ನಡೆದ ಯೋಗ ಶಿಬಿರದ ಸಮಾರೋಪ ಸಮಾರಂಭವು ಗಣ್ಯರ ಸಮ್ಮುಖದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಯಕ್ಷಗಾನ ಗುರುಗಳಾದ ಲಕ್ಷ್ಮಣ ಗೌಡ ಬೆಳಾಲು ಮಾತನಾಡಿ ” ಯೋಗ ಹಾಗೂ ಮಕ್ಕಳ ಮನಸ್ಸು ಒಂದಕ್ಕೊಂದು ಪೂರಕವಾಗಿದೆ. ಮುಂದಿನ ದಿನಗಳಲ್ಲಿ ಯಕ್ಷಗಾನ ವಿಶ್ವ ವ್ಯಾಪ್ತಿಯಾಗಲಿ” ಎಂದು ಶುಭ ಹಾರೈಸಿದರು. ಶ್ರೀ ಧರ್ಮಸ್ಥಳ ನ್ಯಾಚುರೋಪತಿ ಕಾಲೇಜಿನ ಉಪನ್ಯಾಸಕಿ ಡಾ‌. ರೆನಿತಾ ಮಾತನಾಡಿ “ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಯೋಗ ಸಹಕಾರಿ, ಜೊತೆಗೆ ಮಕ್ಕಳು ಉತ್ತಮ ಆಹಾರ ವನ್ನು ಸೇವನೆ ಮಾಡಿ ” ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ವಹಿಸಿದ್ದರು.

ವೇದಿಕೆಯಲ್ಲಿ ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕರರಾದ ಸಾನಿಕಾ ಹಾಗೂ ಅನಘಾ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಶಾಲಾ ಸಹ ಶಿಕ್ಷಕಿ ರೇವತಿ ಇವರು ಸ್ವಾಗತಿಸಿದರು. ಸಹ ಶಿಕ್ಷಕಿ ಗೀತಾ ವಂದಿಸಿದರು.
ಕಾರ್ಯಕ್ರಮದ ನಿರೂಪಣೆ ಯನ್ನು ಶಾಲಾ ಧೈಹಿಕ ಶಿಕ್ಷಣ ಶಿಕ್ಷಕ ಪ್ರಜ್ವಲ್ ನೆರವೇರಿಸಿದರು.

Related posts

ಮರೋಡಿ: ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ, ಧಾರ್ಮಿಕ ಸಭೆ-ಶ್ರದ್ದಾ ಕೇಂದ್ರಗಳ ಅಭಿವೃದ್ಧಿಯಿಂದ ಬದುಕಿನಲ್ಲಿ ನೆಮ್ಮದಿ: ಸುಮಂತ್ ಕುಮಾರ್ ಜೈನ್-ಇಂದು (ಎ. 1) ಶ್ರೀ ಬ್ರಹ್ಮ ಬೈದರ್ಕಳ ಹಾಗೂ ಶ್ರೀ ಮಾಯಂದಾಲೆ ನೇಮೋತ್ಸವ

Suddi Udaya

ಧರ್ಮಸ್ಥಳ: ಬೀಡಿನಲ್ಲಿ ಹೊಸ ಅಕ್ಕಿ ಊಟ

Suddi Udaya

ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ ಧನಸಹಾಯ ವಿತರಣೆ

Suddi Udaya

ಫೆ.19-24: ಉಜಿರೆಯಲ್ಲಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ಬೆಳಾಲು ಶಿಲ್ಪಿ ಶಶಿಧರ ಆಚಾರ್ಯರಿಗೆ ಶಿಲ್ಪ ಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿ ಪ್ರಧಾನ

Suddi Udaya

ಬುರುಡೆ ಷಡ್ಯಂತ್ರ ಪ್ರಕರಣ: ಇಬ್ಬರ ಮೊಬೈಲ್ ಬಿಡುಗಡೆ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Suddi Udaya
error: Content is protected !!