June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

ನಡ : “ವಿದ್ಯಾರ್ಥಿಗಳು ಭವಿಷ್ಯದ ಮತದಾರರು. ಅವರು ಆಸಕ್ತಿಯಿಂದ ಮತ್ತು ಜವಾಬ್ದಾರಿಯಿಂದ ಚುನಾವಣೆಯಲ್ಲಿ ಭಾಗವಹಿಸಬೇಕು. ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಬೇಕು. ಕೀಳರಿಮೆಗಿಂತ ದೊಡ್ಡ ಶತ್ರು ಯಾರೂ ಇಲ್ಲ. ಎಲ್ಲರ ಜೊತೆಗೆ ಸೌಹಾರ್ದ ಸಂಬಂಧ ಇದ್ದಾಗ ಬದುಕಿನಲ್ಲಿ ಸಾಧನೆ ಸಾಧ್ಯವಾಗುತ್ತದೆ.”ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ದಿವ್ಯ ಕೆ ಇವರು ಸರ್ಕಾರಿ ಪದವಿ ಪೂರ್ವ ಕಾಲೇಜು ನಡ ಇಲ್ಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಸಂಸ್ಥೆಯ ಪ್ರಾಂಶುಪಾಲರಾದ ಲಿಲ್ಲಿ ಪಿವಿ ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಮಾಜಿ ಪ್ರಾಂಶುಪಾಲರಾದ ಚಂದ್ರಶೇಖರ್ ಹಾಗೂ ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೋಹನಗೌಡ ಉಪಸ್ಥಿತರಿದ್ದರು. ಉಪನ್ಯಾಸಕರುಗಳಾದ ಸುಕನ್ಯ ನಿರೂಪಿಸಿದ ಕಾರ್ಯಕ್ರಮದಲ್ಲಿ ವಸಂತಿ ಪಿ ಸ್ವಾಗತಿಸಿ, ಶಿಲ್ಪಾ ಡಿ ಪ್ರಸ್ತಾವನೆಗೈದು, ಪವಿತ್ರ ವಂದಿಸಿದರು. ಕಾಲೇಜು ವಿದ್ಯಾರ್ಥಿ ನಾಯಕನಾಗಿ ಚರಣ್ ಹಾಗೂ ಕಾಲೇಜು ಕಾರ್ಯದರ್ಶಿಯಾಗಿ ಸ್ಪೂರ್ತಿ ಆರ್ ಆಯ್ಕೆಯಾದರು.

Related posts

ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಿಂದ ಆತ್ಮ ಯೋಜನೆಯಡಿ ರೈತರ ಅಧ್ಯಯನ ಪ್ರವಾಸ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

Suddi Udaya

ಬಳಂಜದಲ್ಲಿ ಗುಡ್ಡ ಕುಸಿತ, ಕುಸಿಯುವ ಭೀತಿಯಲ್ಲಿ ಮನೆ

Suddi Udaya

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya

ಒಂದು ಕ್ವಿಂಟಾಲ್ ಗಾಂಜಾ ವಶಪಡಿಸಿದ ಪ್ರಕರಣ: ಕಕ್ಕಿಂಜೆಯ ಇಬ್ಬರು ಸೇರಿದಂತೆ ಮೂವರು ಆರೋಪಿಗಳ ಬಂಧನ

Suddi Udaya
error: Content is protected !!