August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

ನಡ : “ವಿದ್ಯಾರ್ಥಿಗಳು ಭವಿಷ್ಯದ ಮತದಾರರು. ಅವರು ಆಸಕ್ತಿಯಿಂದ ಮತ್ತು ಜವಾಬ್ದಾರಿಯಿಂದ ಚುನಾವಣೆಯಲ್ಲಿ ಭಾಗವಹಿಸಬೇಕು. ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಬೇಕು. ಕೀಳರಿಮೆಗಿಂತ ದೊಡ್ಡ ಶತ್ರು ಯಾರೂ ಇಲ್ಲ. ಎಲ್ಲರ ಜೊತೆಗೆ ಸೌಹಾರ್ದ ಸಂಬಂಧ ಇದ್ದಾಗ ಬದುಕಿನಲ್ಲಿ ಸಾಧನೆ ಸಾಧ್ಯವಾಗುತ್ತದೆ.”ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ದಿವ್ಯ ಕೆ ಇವರು ಸರ್ಕಾರಿ ಪದವಿ ಪೂರ್ವ ಕಾಲೇಜು ನಡ ಇಲ್ಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಸಂಸ್ಥೆಯ ಪ್ರಾಂಶುಪಾಲರಾದ ಲಿಲ್ಲಿ ಪಿವಿ ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಮಾಜಿ ಪ್ರಾಂಶುಪಾಲರಾದ ಚಂದ್ರಶೇಖರ್ ಹಾಗೂ ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೋಹನಗೌಡ ಉಪಸ್ಥಿತರಿದ್ದರು. ಉಪನ್ಯಾಸಕರುಗಳಾದ ಸುಕನ್ಯ ನಿರೂಪಿಸಿದ ಕಾರ್ಯಕ್ರಮದಲ್ಲಿ ವಸಂತಿ ಪಿ ಸ್ವಾಗತಿಸಿ, ಶಿಲ್ಪಾ ಡಿ ಪ್ರಸ್ತಾವನೆಗೈದು, ಪವಿತ್ರ ವಂದಿಸಿದರು. ಕಾಲೇಜು ವಿದ್ಯಾರ್ಥಿ ನಾಯಕನಾಗಿ ಚರಣ್ ಹಾಗೂ ಕಾಲೇಜು ಕಾರ್ಯದರ್ಶಿಯಾಗಿ ಸ್ಪೂರ್ತಿ ಆರ್ ಆಯ್ಕೆಯಾದರು.

Related posts

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಮಾನ ಮಾಡದಂತೆ ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಬಳಂಜ: ಎಲ್ಯೊಟ್ಟು ನಿವಾಸಿ ಸೋಮನಾಥ ಪೂಜಾರಿ ನಿಧನ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಹಾ.ಉ. ಕಾರ್ಯದರ್ಶಿಯವರ ವತಿಯಿಂದ ಗೌರವ ಡಾಕ್ಟರೇಟ್ ಅವಾರ್ಡ್ ಪುರಸ್ಕೃತೆ ಡಾ| ಸಾವಿತ್ರಿ ರೈ ಕೆ ರವರಿಗೆ ಸನ್ಮಾನ

Suddi Udaya

ಶಿಶಿಲ ಸ.ಉ. ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಕಾಮಗಾರಿ ಬಗ್ಗೆ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಬದುಕು ಕಟ್ಟೋಣ ತಂಡದಿಂದ ಸಮಾಲೋಚನಾ ಸಭೆ

Suddi Udaya
error: Content is protected !!