August 10, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಂಡ್ಯದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿ ಜಯಚಂದ್ರ ಬಂಧನ

ಬೆಳ್ತಂಗಡಿ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಶೆಟ್ಟಿಹಳ್ಳಿಯಲ್ಲಿ ಜೂ.22 ರಂದು ಕ್ಷುಲ್ಲಕ ಕಾರಣಕ್ಕೆ ಗಣೇಶ್ (35) ಎಂಬಾತನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದ ಗ್ರಾಮಾಡಳಿತಾಧಿಕಾರಿ ಜಯಚಂದ್ರನನ್ನು ಕೆ. ಎಂ. ದೊಡ್ಡಿ ಪೋಲೀಸರು ಆರೋಪಿಯನ್ನು ಶೆಟ್ಟಿಹಳ್ಳಿಯಲ್ಲಿ ಜೂ. 24 ರಂದು ಮಧ್ಯಾಹ್ನ ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂದಿಸಿದ್ದಂತೆ ಮಹಜರು ಪ್ರಕ್ರಿಯೆ ನಡೆಸಿದ ಪೊಲೀಸರು ಆರೋಪಿ ಜಯಚಂದ್ರನನ್ನು ವಿಚಾರಣೆ ನಡೆಸುತ್ತಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕೆಮಿಂಜೆ ಗ್ರಾಮ ಆಡಳಿತ ಅಧಿಕಾರಿ ಆಗಿರುವ ಜಯಚಂದ್ರ ಈ ಹಿಂದೆ ಬೆಳ್ತಂಗಡಿ ತಾಲೂಕಿನ ಬಾರ್ಯ, ತೆಕ್ಕಾರು ಗ್ರಾಮದಲ್ಲಿ ವಿ.ಎ.ಆಗಿ ಕರ್ತವ್ಯ ನಿರ್ವಹಿಸಿದ್ದ. ಬೆಳ್ತಂಗಡಿ ಆಡಳಿತ ಸೌಧದದಲ್ಲಿ ಕೇಸ್ ವರ್ಕರ್ ಆಗಿರುವ ವೇಳೆ 94 ಸಿ ಅಕ್ರಮ ಸಕ್ರಮ ದಾಖಲೆಗಳ ಗೋಲ್ ಮಾಲ್ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮೂರು ತಿಂಗಳು ಜೈಲಿನಲ್ಲಿದ್ದ ಬಳಿಕ ಪುತ್ತೂರು ತಾಲೂಕಿಗೆ ವರ್ಗಾವಣೆಯಾಗಿದ್ದ.

Related posts

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

Suddi Udaya

6ನೇ ಏಷ್ಯನ್ ಯೋಗಾಸನ ಚಾಂಪಿಯನ್‌ಶಿಪ್ 2025 : ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಆಹ್ವಾನ

Suddi Udaya

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

Suddi Udaya

ಸಿಎ ಪರೀಕ್ಷೆಯಲ್ಲಿ ಮಡಂತ್ಯಾರಿನ ಅಲ್ ಸ್ಟನ್ ಸೋನಿಲ್ ಡಯಾಸ್ ತೇರ್ಗಡೆ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ನಕ್ಸಲ್ ವಿಕ್ರಮ್ ಗೌಡ ಎನ್ ಕೌಂಟರ್ ಪ್ರಕರಣ: ತಕ್ಷಣ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು: ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಒತ್ತಾಯ

Suddi Udaya
error: Content is protected !!