23.4 C
ಪುತ್ತೂರು, ಬೆಳ್ತಂಗಡಿ
June 26, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಂಡ್ಯದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿ ಜಯಚಂದ್ರ ಬಂಧನ

ಬೆಳ್ತಂಗಡಿ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಶೆಟ್ಟಿಹಳ್ಳಿಯಲ್ಲಿ ಜೂ.22 ರಂದು ಕ್ಷುಲ್ಲಕ ಕಾರಣಕ್ಕೆ ಗಣೇಶ್ (35) ಎಂಬಾತನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದ ಗ್ರಾಮಾಡಳಿತಾಧಿಕಾರಿ ಜಯಚಂದ್ರನನ್ನು ಕೆ. ಎಂ. ದೊಡ್ಡಿ ಪೋಲೀಸರು ಆರೋಪಿಯನ್ನು ಶೆಟ್ಟಿಹಳ್ಳಿಯಲ್ಲಿ ಜೂ. 24 ರಂದು ಮಧ್ಯಾಹ್ನ ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂದಿಸಿದ್ದಂತೆ ಮಹಜರು ಪ್ರಕ್ರಿಯೆ ನಡೆಸಿದ ಪೊಲೀಸರು ಆರೋಪಿ ಜಯಚಂದ್ರನನ್ನು ವಿಚಾರಣೆ ನಡೆಸುತ್ತಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕೆಮಿಂಜೆ ಗ್ರಾಮ ಆಡಳಿತ ಅಧಿಕಾರಿ ಆಗಿರುವ ಜಯಚಂದ್ರ ಈ ಹಿಂದೆ ಬೆಳ್ತಂಗಡಿ ತಾಲೂಕಿನ ಬಾರ್ಯ, ತೆಕ್ಕಾರು ಗ್ರಾಮದಲ್ಲಿ ವಿ.ಎ.ಆಗಿ ಕರ್ತವ್ಯ ನಿರ್ವಹಿಸಿದ್ದ. ಬೆಳ್ತಂಗಡಿ ಆಡಳಿತ ಸೌಧದದಲ್ಲಿ ಕೇಸ್ ವರ್ಕರ್ ಆಗಿರುವ ವೇಳೆ 94 ಸಿ ಅಕ್ರಮ ಸಕ್ರಮ ದಾಖಲೆಗಳ ಗೋಲ್ ಮಾಲ್ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮೂರು ತಿಂಗಳು ಜೈಲಿನಲ್ಲಿದ್ದ ಬಳಿಕ ಪುತ್ತೂರು ತಾಲೂಕಿಗೆ ವರ್ಗಾವಣೆಯಾಗಿದ್ದ.

Related posts

ವಾಣಿ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ಥ್ರೋಬಾಲ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಹರೀಶ್ ಕುಮಾರ್ ಭೇಟಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಶಿಶಿಲ: ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ ನಿಧನ

Suddi Udaya

ಉಜಿರೆ: ಟಾಟ ಇಂಡಿಕ್ಯಾಶ್ ಎಟಿಎಂ ಸೇವೆ ಶುಭಾರಂಭ

Suddi Udaya
error: Content is protected !!