ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ ಕಾರ್ಯಕ್ರಮವನ್ನು ಜೂನ್25ರಂದು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರು, ವಿನಯಚಂದ್ರ ಮಾಜಿ ಅಧ್ಯಕ್ಷರು, ರಾಮಣ್ಣ ಮಾಜಿ ಸದಸ್ಯರು ,ಆರೋಗ್ಯ ಕಾರ್ಯಕರ್ತರು ,ಆಶಾ ಕಾರ್ಯಕರ್ತೆಯರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ತಂಡದವರು,ಪಂಚಾಯತ್ ಸಿಬ್ಬಂದಿ ವರ್ಗ ದವರು, ಗ್ರಂಥಾಲಯ ಮೇಲ್ವಿಚಾರಕರು,ಸುಜ್ಞಾನ ಸಂಜೀವಿನಿ ಒಕ್ಕೂಟದ ಸದಸ್ಯರು, ಭಾಗವಹಿಸಿ ಬೃಹತ್ ಸ್ವಚ್ಚತಾ ಅಭಿಯಾನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರಿಗೆ ಧನ್ಯವಾದವಿತ್ತರು.












