23.4 C
ಪುತ್ತೂರು, ಬೆಳ್ತಂಗಡಿ
June 26, 2026
ತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಸತ್ತು ಚುನಾವಣೆ

ಸವಣಾಲು: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇಲ್ಲಿನ 2026 – 27 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ಪದಾಧಿಕಾರಿಗಳ ಆಯ್ಕೆ ಮಾಡಲು ಜೂನ್ 23ರಂದು ಚುನಾವಣೆಯನ್ನು ನಡೆಸಲಾಯಿತು.

ಎಲ್ಲಾ ವಿದ್ಯಾರ್ಥಿಗಳ ಮತದಾನ ಪ್ರಕ್ರಿಯೆಯು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮಾದರಿಯಲ್ಲಿ ಮೊಬೈಲ್ ನಲ್ಲಿ EVM ಇದರ ಮೂಲಕ ನೆರವೇರಿತು. ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶದೊಂದಿಗೆ ಮತದಾನದ ಕಾರ್ಯ ಚಟುವಟಿಕೆಗಳನ್ನು ಆಧುನಿಕ ಮೊಬೈಲ್ ತಂತ್ರಜ್ಞಾನದ ಮೂಲಕ ಮಾಡಲಾಯಿತು. ಮತದಾನದ ಎಣಿಕೆಯನ್ನು ಮಾಡಿ ಫಲಿತಾಂಶ ಘೋಷಣೆಯನ್ನು ಮಾಡಲಾಯಿತು.

ಶಾಲಾ ವಿದ್ಯಾರ್ಥಿ ಸಂಘದ ನಾಯಕನಾಗಿ ಬಿ. ತೇಜಸ್ ಭಟ್, ಉಪನಾಯಕಿಯಾಗಿ ಫಾತಿಮಾ ಅಸ್ನ ಆಯ್ಕೆಯಾದರು. ಗೃಹ ಮಂತ್ರಿಯಾಗಿ ಹೃತಿಕ್. ಆರ್ ಮತ್ತು ಮಹಮ್ಮದ್ ಶೈಫ್, ಆರೋಗ್ಯ ಮತ್ತು ಸ್ವಚ್ಛತಾ ಮಂತ್ರಿಯಾಗಿ ಸುಹ ಮತ್ತು ಚಿಂತನ್, ಗ್ರಂಥಾಲಯ ಮತ್ತು ಶಿಕ್ಷಣ ಮಂತ್ರಿಯಾಗಿ ಗೌತಮಿ ಮತ್ತು ಶಿಫಾ, ನೀರಾವರಿ ಮತ್ತು ತೋಟಗಾರಿಕಾ ಕೃಷಿಮಂತ್ರಿಯಾಗಿ ವಂಶಿಕ್ ಮತ್ತು ಚೇತನ್, ಕ್ರೀಡಾ ಮತ್ತು ಸಾಂಸ್ಕೃತಿಕ ಮಂತ್ರಿಯಾಗಿ ಆಯಿಷಾ ಮತ್ತು ನಿಹಾಲ್ ರವರನ್ನು ಆಯ್ಕೆ ಮಾಡಲಾಯಿತು.
ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸಲು ಮತ್ತು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಬೇಕು ಎಂಬುದಾಗಿ ಶಿಕ್ಷಕರು ಮನವರಿಕೆ ಮಾಡಿ ವಿಜೇತರನ್ನು ಅಭಿನಂದಿಸಿದರು.

Related posts

ಪಟ್ರಮೆ: ವಿಷ್ಣುಮೂರ್ತಿ ದೇವಸ್ಥಾನದ ಹಿಂಭಾಗದ ತಡೆಗೋಡೆ ಕುಸಿತ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯ ನವೀಕೃತ ಶಾಲಾ ಸಭಾಂಗಣ ಮತ್ತು ವಜ್ರ ಮಹೋತ್ಸವದ ಉದ್ಘಾಟನೆ

Suddi Udaya

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ಅಪಪ್ರಚಾರ ಕೊನೆಯಾಗುವಂತೆ ಕರವೇ ಮಹಿಳಾ ತಂಡದ ಸದಸ್ಯರಿಂದ ಉರುಳು ಸೇವೆ

Suddi Udaya

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

Suddi Udaya

ಪಣಕಜೆ : ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು: ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು

Suddi Udaya
error: Content is protected !!