August 10, 2026
ತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಸತ್ತು ಚುನಾವಣೆ

ಸವಣಾಲು: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇಲ್ಲಿನ 2026 – 27 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ಪದಾಧಿಕಾರಿಗಳ ಆಯ್ಕೆ ಮಾಡಲು ಜೂನ್ 23ರಂದು ಚುನಾವಣೆಯನ್ನು ನಡೆಸಲಾಯಿತು.

ಎಲ್ಲಾ ವಿದ್ಯಾರ್ಥಿಗಳ ಮತದಾನ ಪ್ರಕ್ರಿಯೆಯು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮಾದರಿಯಲ್ಲಿ ಮೊಬೈಲ್ ನಲ್ಲಿ EVM ಇದರ ಮೂಲಕ ನೆರವೇರಿತು. ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶದೊಂದಿಗೆ ಮತದಾನದ ಕಾರ್ಯ ಚಟುವಟಿಕೆಗಳನ್ನು ಆಧುನಿಕ ಮೊಬೈಲ್ ತಂತ್ರಜ್ಞಾನದ ಮೂಲಕ ಮಾಡಲಾಯಿತು. ಮತದಾನದ ಎಣಿಕೆಯನ್ನು ಮಾಡಿ ಫಲಿತಾಂಶ ಘೋಷಣೆಯನ್ನು ಮಾಡಲಾಯಿತು.

ಶಾಲಾ ವಿದ್ಯಾರ್ಥಿ ಸಂಘದ ನಾಯಕನಾಗಿ ಬಿ. ತೇಜಸ್ ಭಟ್, ಉಪನಾಯಕಿಯಾಗಿ ಫಾತಿಮಾ ಅಸ್ನ ಆಯ್ಕೆಯಾದರು. ಗೃಹ ಮಂತ್ರಿಯಾಗಿ ಹೃತಿಕ್. ಆರ್ ಮತ್ತು ಮಹಮ್ಮದ್ ಶೈಫ್, ಆರೋಗ್ಯ ಮತ್ತು ಸ್ವಚ್ಛತಾ ಮಂತ್ರಿಯಾಗಿ ಸುಹ ಮತ್ತು ಚಿಂತನ್, ಗ್ರಂಥಾಲಯ ಮತ್ತು ಶಿಕ್ಷಣ ಮಂತ್ರಿಯಾಗಿ ಗೌತಮಿ ಮತ್ತು ಶಿಫಾ, ನೀರಾವರಿ ಮತ್ತು ತೋಟಗಾರಿಕಾ ಕೃಷಿಮಂತ್ರಿಯಾಗಿ ವಂಶಿಕ್ ಮತ್ತು ಚೇತನ್, ಕ್ರೀಡಾ ಮತ್ತು ಸಾಂಸ್ಕೃತಿಕ ಮಂತ್ರಿಯಾಗಿ ಆಯಿಷಾ ಮತ್ತು ನಿಹಾಲ್ ರವರನ್ನು ಆಯ್ಕೆ ಮಾಡಲಾಯಿತು.
ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸಲು ಮತ್ತು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಬೇಕು ಎಂಬುದಾಗಿ ಶಿಕ್ಷಕರು ಮನವರಿಕೆ ಮಾಡಿ ವಿಜೇತರನ್ನು ಅಭಿನಂದಿಸಿದರು.

Related posts

ಅರಸಿನಮಕ್ಕಿಯ ಪ್ರಮುಖ್ ತುಳುಪುಳೆ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ಸ್ಥಾನ

Suddi Udaya

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತ ಭೇಟಿ: ವಿಶೇಷ ಪೂಜೆ

Suddi Udaya

ಬಂಟರ ಯಾನೆನಾಡವರ ಸಂಘ ಬೆಳ್ತಂಗಡಿ ನೇತೃತ್ವದಲ್ಲಿ: ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ – ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ. ವಿಶ್ವ ಬಂಟರ ಮಾಹಿತಿ ಕೋಶ’ಕ್ಕಾಗಿ ಕುಟುಂಬದ ಸಮಗ್ರ ಮಾಹಿತಿ ಸಂಗ್ರಹ: ಅಜಿತ್ ಕುಮಾರ್ ರೈ ಮಾಲಾಡಿ

Suddi Udaya

ಪಣಕಜೆ 23ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ನಮ್ಮೂರು ನಮ್ಮ ಕೆರೆ ಸಮಿತಿ ಸದಸ್ಯರೊಂದಿಗೆ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ನಿಡ್ಲೆಯ ಪ್ರತಿಷ್ಠಿತ ಸಂಸ್ಥೆ ಅಗ್ರಿಲೀಫ್ ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya
error: Content is protected !!