August 10, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾರ್ವಜನಿಕ ರಸ್ತೆಯ ದುರ್ಬಳಕೆ ವಿರುದ್ಧ ಎಸ್.ಡಿ.ಪಿ.ಐ. ದೂರು

ಬೆಳ್ತಂಗಡಿ: ಲಾಯಿಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಆದರ್ಶನಗರದಲ್ಲಿ ಸಾರ್ವಜನಿಕ ರಸ್ತೆಯನ್ನು ಖಾಸಗಿ ಉದ್ದೇಶಗಳಿಗೆ ದುರ್ಬಳಕೆ ಮಾಡಿಕೊಂಡು ಸಾರ್ವಜನಿಕರಿಗೆ ಸಂಚಾರ ತೊಂದರೆ ಉಂಟು ಮಾಡುತ್ತಿರುವ ಕುರಿತು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಲಾಯಿಲಾ ಬ್ರಾಂಚ್ ಸಮಿತಿಯ ವತಿಯಿಂದ ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಸಾರ್ವಜನಿಕ ರಸ್ತೆಯನ್ನು ಅತಿಕ್ರಮಿಸಿ ಹಾಗೂ ದುರ್ಬಳಕೆ ಮಾಡುತ್ತಿರುವುದರಿಂದ ಸ್ಥಳೀಯ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಸಮಸ್ಯೆಗೆ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಗ್ರಾಮಸ್ಥರೊಂದಿಗೆ ಸೇರಿ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕುವ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.ಈ ಸಂದರ್ಭದಲ್ಲಿ ಲಾಯಿಲಾ ಬ್ರಾಂಚ್ ಅಧ್ಯಕ್ಷರಾದ ಅಸಿಫ್, ಲಾಯಿಲಾ ಬ್ಲಾಕ್ ಅಧ್ಯಕ್ಷರಾದ ಸಲೀಂ ಲಾಯಿಲಾ, ಕಾರ್ಯದರ್ಶಿ ಸಾದಿಕ್ ಲಾಯಿಲಾ ಹಾಗೂ ಸ್ಥಳೀಯರಾದ ಅಸಿಫ್, ಹಾರಿಶ್ ಮತ್ತು ಇರ್ಫಾನ್ ಉಪಸ್ಥಿತರಿದ್ದರು.

Related posts

ಸೋಣಂದೂರು: ಜಿಲ್ಲಾ ಮಟ್ಟದ ಪುರುಷರ 55 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ

Suddi Udaya

ಚಿತ್ರಕಲಾ ಗ್ರೇಡ್ ಪರೀಕ್ಷೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ

Suddi Udaya

ಕೊಕ್ಕಡ: ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಜ.21- 25: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Suddi Udaya
error: Content is protected !!