28 C
ಪುತ್ತೂರು, ಬೆಳ್ತಂಗಡಿ
August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಶ್ರೀರಾಮ ಶಾಲೆ ಸುಲ್ಕೇರಿಯಲ್ಲಿ ಆರೋಗ್ಯಕರ ವಯೋವೃದ್ಧಿಗಾಗಿ ಯೋಗ ಎಂಬ ಧ್ಯೇಯ ವಾಕ್ಯದೊಂದಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜು ಪೂಜಾರಿ ವಹಿಸಿಕೊಂಡಿದ್ದು ಯೋಗ ದಿನಾಚರಣೆಯ ಮಹತ್ವದ ಬಗ್ಗೆ ಬೌದ್ಧಿಕ್ ನೀಡಲಿರುವ ವಿಜಯ್ ಜಿ ಉಜಿರೆ ಸಂಘದ ಜಿಲ್ಲಾ ಸೇವಾ ಪ್ರಮುಖ್ ಹಾಗೂ ಪ್ರಕಾಶ್ ಕಟ್ಟೆ ತಾಲೂಕು ಶಾರೀರಿಕ ಪ್ರಮುಖ್ ಉಪಸ್ಥಿತರಿದ್ದರು. ವಿಜಯ್ ಜಿ ಇವರು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುವ ಪ್ರಾಚೀನ ಭಾರತೀಯ ಕಲೆಯಾದ ಯೋಗದ ಮಹತ್ವವನ್ನು ಸಾರಲು ಮತ್ತು ಅದನ್ನು ಜೀವನದ ಭಾಗವಾಗಿಸಲು ವಿಶ್ವ ಸಂಸ್ಥೆಯು 2014 ರಲ್ಲಿ ಜೂ.21ನ್ನು ಯೋಗ ದಿನವೆಂದು ಘೋಷಿಸಲಾಯಿತು. ಅಲ್ಲಿಂದ ಇಡೀ ವಿಶ್ವದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಬೌದ್ಧಿಕ್ ನೀಡಿದರು ಮುಂದಕ್ಕೆ ವಿದ್ಯಾರ್ಥಿಗಳಿಂದ ಸಾಮೂಹಿಕ ಯೋಗಾಭ್ಯಾಸವನ್ನು ಮಾಡಿಸಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಕಿ ಹೊನ್ನಮ್ಮ ಸ್ವಾಗತಿಸಿ, ಶಿಕ್ಷಕಿ ಅಶ್ವಿನಿ ವಂದಿಸಿದರು . ಶಿಕ್ಷಕಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾನವೀಯತೆ ಮೆರೆದ ಖುಷಿ ಅಂಬ್ಯುಲೆನ್ಸ್ ಡ್ರೈವರ್ ಭುವನೇಶ್ ಹೆಗ್ಡೆ

Suddi Udaya

ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ಬಂಗಾಡಿಯ ರಾಜೇಶ್ ಪುದುಶೇರಿ ನೇಮಕ

Suddi Udaya

ಪದ್ಮುಂಜ ಶ್ರೀ ಗೌರಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕ ಕಾರ್ಯಕ್ರಮ

Suddi Udaya

ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಂದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ

Suddi Udaya

ಬಜಕ್ರೆಸಾಲು ಸೇತುವೆ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆ

Suddi Udaya

ಎಸ್.ಡಿ.ಎಂ ನಲ್ಲಿ ವಿಶ್ವ ಪರಿಸರ ದಿನಾಚರಣೆ, ಉಜಿರೆ ಪೇಟೆಯವರೆಗೆ ವಿದ್ಯಾರ್ಥಿಗಳಿಂದ ಪರಿಸರ ಜಾಥಾ

Suddi Udaya
error: Content is protected !!