ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಔಷಧ ವ್ಯಾಪಾರಸ್ಥರ ಸಂಘದ ಆಶ್ರಯದಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನದ ಆಚರಣೆಯನ್ನು ಬೆಳ್ತಂಗಡಿಯಲ್ಲಿ ಆಚರಿಸಲಾಯಿತು. ಅಯ್ಯಪ್ಪ ಗುಡಿಯಿಂದ ಜಾಥಾ ಮೂಲಕ ಅಂಬೇಡ್ಕರ್ ಭವನಕ್ಕೆ -ಸಾಗಿತು, ಮೆರವಣಿಗೆಯಲ್ಲಿ ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಂಚಾರಿ ದಳದ ಪೊಲೀಸ್ ಸಿಬ್ಬಂದಿ ಜಾಥಾದಲ್ಲಿ ಪಾಲ್ಗೊಂಡರು.
ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಕ ಬಾಬು ಬಿ ಎನ್, ಪ್ರಸನ್ನ ಫಾರ್ಮಸಿ ಕಾಲೇಜಿನ ಪ್ರಿನ್ಸಿಪಾಲ್ ಮಲ್ಲಿಕಾರ್ಜುನ ಗೌಡ, ಸಂಚಾರಿ ದಳದ ಎಸ್.ಐ ಲಿಂಗಪ್ಪ, ಯುವ ವಿದ್ಯಾರ್ಥಿ ಗಳಿಗೆ ಮಾದಕ ದ್ರವ್ಯದ ಬಗ್ಗೆ ತಿಳಿ ಹೇಳಿದರು.
ಸಂಘದ ಅಧ್ಯಕ್ಷ ಉದಯ ಕುಮಾರ್ ಜೈನ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಪ್ರಕಾಶ್ ಫೆರ್ನಾಂಡೀಸ್ ವಂದಿಸಿದರು.
ಡಾ. ಸೌಮ್ಯ ಬೆಳಾಲು ಕಾರ್ಯಕ್ರಮ ಸಂಯೋಜಿಸಿದರು.












