August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಗ್ರಾಮೀಣ ಮಟ್ಟದ ಪುಸ್ತಕೋತ್ಸವ ಪುಸ್ತಕ ಪ್ರದರ್ಶನ ಮತ್ತು ಮಾರಾಟ

ಗುರುವಾಯನಕೆರೆ ಶ್ರೀ ಶಾರದಾ ಕಲಾಮಂಟಪ ಗೆಳೆಯರ ಬಳಗ ಇದರ ಆಶ್ರಯದಲ್ಲಿ ಜ್ಞಾನ ಗಂಗಾ ಪುಸ್ತಕ ಮಳಿಗೆ ಪುತ್ತೂರು ಇದರ ಸಹಯೋಗದೊಂದಿಗೆ ಜೂ.26ರಿಂದ 28 ರವರೆಗೆ ನಡೆಯುವ ಗ್ರಾಮೀಣ ಮಟ್ಟದ ಪುಸ್ತಕೋತ್ಸವ, ಪುಸ್ತಕ ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಶ್ರೀನಾಥ್ ಎಂ ಪಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡುತ್ತಾ, ಆಧುನಿಕ ತಂತ್ರಜ್ಞಾನದ ಭರಾಟೆಯಲ್ಲಿ ಪುಸ್ತಕ ಓದುವವರು ವಿರಳವಾಗುತ್ತಿದ್ದಾರೆ. ಇಂತಹ ಕಾಲಘಟ್ಟದಲ್ಲಿ ಗ್ರಾಮೀಣ ಮಟ್ಟದ ಪುಸ್ತಕೋತ್ಸವ ಆಯೋಜನೆಗೊಂಡಿರುವುದು ಶ್ಲಾಘನೀಯವಾಗಿದೆ. ಪ್ರತಿ ಶಾಲಾ ಕಾಲೇಜುಗಳಲ್ಲಿ ಇಂತಹ ಪುಸ್ತಕ ಪ್ರದರ್ಶನ ನಡೆದರೆ ವಿದ್ಯಾರ್ಥಿಗಳು ಓದುವ ಅಭಿರುಚಿಯನ್ನು ಹೊಂದಲು ಸಹಾಯಕವಾಗುತ್ತದೆ. ಗ್ರಾಮೀಣ ಮಟ್ಟದಲ್ಲಿ ಮನೆಮನೆಗೆ ಪುಸ್ತಕ ತಲುಪಿಸುವ ಯೋಜನೆಗಳು ಕಾರ್ಯಗತವಾಗಬೇಕಾಗಿದೆ ಎಂದರು.

ಮುಖ್ಯ ಅತಿಥಿಗಳಾದ ಪುಂಜಾಲಕಟ್ಟೆ ಸರಕಾರಿ ಪ್ರೌಢ ಶಾಲಾ ಶಿಕ್ಷಕರಾದ ಧರಣೇಂದ್ರ ಜೈನ್ ಮಾತನಾಡಿ, ವಿದ್ಯಾರ್ಥಿಗಳಿಗೆ ಪುಸ್ತಕ ಓದುವ ಅಭಿರುಚಿಯನ್ನು ಹೆಚ್ಚಿಸುವ ಸಲುವಾಗಿ ಕರ್ನಾಟಕ ಸರಕಾರವು ಕೆಲವೊಂದು ಯೋಜನೆಗಳನ್ನು ಹಾಕಿಕೊಂಡಿದ್ದು ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ. ಇದರಿಂದ ಬರಹಗಾರರು ಹಾಗೂ ಪುಸ್ತಕ ಪ್ರಕಟಿಸುವವರಿಗೆ ಸಹಾಯಕವಾಗುತ್ತದೆ ಎಂದರು.

ಗುರುವಾಯನಕೆರೆ ಶಾರದಾ ಗೆಳೆಯರ ಬಳಗದ ಅಧ್ಯಕ್ಷ ತಿಲಕರಾಜ್, ಶಾರದಾ ಭಜನ ಮಂಡಳಿಯ ನಿಕಟ ಪೂರ್ವ ಅಧ್ಯಕ್ಷ ಶ್ರೀಮತಿ ರೀತಾ ವೈ ಆಚಾರ್ಯ, ಕಾರ್ಯಕ್ರಮದ ಆಯೋಜಕ ದೇವಿಪ್ರಸಾದ್ ಆಚಾರ್ಯ ಗುರುವಾಯನಕೆರೆ, ಡಾ ವೇಣುಗೋಪಾಲ ಶರ್ಮ, ಕುವೆಟ್ಟು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಮಂಜುನಾಥ ಕುಂಬಳೆ ಉಪಸ್ಥಿತರಿದ್ದರು.
ಆನಂದ ಕೋಟ್ಯಾನ್ ಸ್ವಾಗತಿಸಿದರು. ಶ್ರೀಮತಿ ಸುಧಾ ಆರ್ ಸಾಲಿಯಾನ್ ಧನ್ಯವಾದವಿತ್ತರು. ಉಪನ್ಯಾಸಕ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 344 ಕೋಟಿ ವಾರ್ಷಿಕ ವ್ಯವಹಾರ: 1 ಕೋಟಿ 9 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 12.50 ಡಿವಿಡೆಂಟ್ ಘೋಷಣೆ:

Suddi Udaya

ಇಂಗ್ಲೆಂಡ್ ನಲ್ಲಿ ಗುರುವಾಯನಕೆರೆಯ 12 ವರ್ಷದ ಬಾಲಕನ ಮಹಾನ್ ಸಾಧನೆ- ಬ್ರಿಟೀಷ್ ನ್ಯಾಷನಲ್ ಚಾಂಪಿಯನ್ ಶಿಪ್ ನ 4ನೇ ಸುತ್ತಿನಲ್ಲಿ ಪ್ರಶಸ್ತಿ ಪಡೆದ ಕಾರ್ ರೇಸರ್ ಕನಿಷ್ಕ್ ರಾವ್

Suddi Udaya

ಚಂದ್ರಹಾಸ ಬಳಂಜರಿಂದ ಸಂವಹನ ಕೌಶಲ್ಯದ ಬಗ್ಗೆ ತರಬೇತಿ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ

Suddi Udaya

ಡಿ.4: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!