June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಹಲಸು ಮತ್ತು ಹಣ್ಣಿನ ಮೇಳದ ಉದ್ಘಾಟನೆ

ಉಜಿರೆ: ರೋಟರಿ ಕ್ಲಬ್ ಬೆಳ್ತಂಗಡಿ, ಪ್ರೇರಣ ಸಂಜೀವಿನಿ ಮಹಿಳಾ ಒಕ್ಕೂಟ, ಬೆನಕ ಇವೆಂಟ್ಸ, ಉಜಿರೆ ಗ್ರಾಮ ಪಂಚಾಯತ್ ಜಂಟಿ ಆಶ್ರಯದಲ್ಲಿ ಉಜಿರೆಯಲ್ಲಿ ನಡೆಯುತ್ತಿರುವ ಹಲಸು ಮತ್ತು ಹಣ್ಣಿನ ಮೇಳವನ್ನು ರಿಬ್ಬನ್ ಕಟ್ ಮಾಡುವುದರ ಮೂಲಕ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೊ. ಡಾ ಪ್ರಕಾಶ ಪ್ರಭು ಇವರು ಉದ್ಘಾಟನೆ ಮಾಡಿದರು.

ಕೃಷಿಕರ ಹಾಗೂ ಕುಲ ಕಸುಬುಗಳ ಉತ್ಪನ್ನ ಹಾಗೂ ಸಣ್ಣ ವ್ಯಾಪಾರಿಗಳನ್ನು ಬೆಂಬಲಿಸಲು ಉಜಿರೆ ಗ್ರಾಮ ಹಾಗೂ ಸುತ್ತಮುತ್ತಲಿನ ಜನರು ಬರಬೇಕು ಎಂದು ಕರೆ ಕೊಟ್ಟರು. ಪ್ರೇರಣ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ವಿನುತ ರಂಜನ ಗೌಡ ಅವರು ದೀಪ ಬೆಳಗಿಸಿ ಶುಭ ಕೋರಿ, ತಮ್ಮ ಒಕ್ಕೂಟದ ಸದಸ್ಯರೂ ಇದರಲ್ಲಿ ಬಹಳ ಆಸಕ್ತಿಯಿಂದ ಸಹಕರಿಸುವುದಾಗಿ ಹೇಳಿದರು.

ಶ್ರೀ ಕೃಷ್ಣಾನುಗ್ರಹದಲ್ಲಿ ಜೂ. 26,27,28 ಬೆಳಗ್ಗೆ 10 ರಿಂದ ರಾತ್ರಿ 9:30 ವರೇಗೆ ನಡೆಯಲಿರುವ ಈ ಮೇಳದ ಸಂಕ್ಷಿಪ್ತ ಮಾಹಿತಿಯನ್ನು ಬೆನಕಾ ಇವೆಂಟ್ಸನ ಮಾಲಕ ಗಣೇಶ ಶೆಟ್ಟಿ ನೀಡಿದರು. ಅತಿಥಿ ರೊ. ಡಾ ಎಂ ಎಂ ದಯಾಕರರು ಹಲಸಿನ ಮತ್ತು ಹಣ್ಣಿನ ಕೃಷಿಕನಾಗಿ, ತಮ್ಮ ಅನುಭವವನ್ನು ಹಂಚಿಕೊಂಡರು.

ವೇದಿಕೆಯಲ್ಲಿ ಬೆನಕ ಇವೆಂಟ್ಸನ ಪದಾಧಿಕಾರಿಗಳಾದ ಭಾಸ್ಕರ ಪೂಜಾರಿ, ಶ್ರೀಧರ ಮರವಂತೆ, ಸಂದೇಶ ಮೊಗೇರರು ಉಪಸ್ಥಿತರಿದ್ದರು. ಆ್ಯನ್ ಡಾ ಅನಿತಾ ದಯಾಕರರು ಭಾಗವಹಿಸಿದರು. ಕಾರ್ಯಕ್ರಮವನ್ನು ರೋಟರಿ ಸದಸ್ಯ , ರಾಜ್ಯ ಪ್ರಶಸ್ತಿ ವಿಜೇತ ಬಿ. ಸೋಮಶೇಖರ ಶೆಟ್ಟಿ ನಿರೂಪಿಸಿದರು.

Related posts

ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

Suddi Udaya

ಶ್ರೀ ಸೌತಡ್ಕ ಕ್ಷೇತ್ರದಲ್ಲಿ ಇಜ್ಜಾವು ಮನೆಯವರಿಂದ ಸೇವಾರ್ಥ ಮೂಡಪ್ಪ ಸೇವೆ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲಿನ ಪೊಲೀಸ್ ಹಲ್ಲೆಗೆ ತಾಲೂಕು ವಕೀಲರ ಸಂಘದಿಂದ ಖಂಡನೆ: ಸೂಕ್ತ ಕಾನೂನು ಕ್ರಮಕ್ಕೆ ಅಗ್ರಹಿಸಿ ತಹಶೀಲ್ದಾ‌ರ್ ಮೂಲಕ ಮುಖ್ಯಮಂತ್ರಿಗೆ ಮನವಿ

Suddi Udaya

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

Suddi Udaya

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya

ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಎಲ್.ಹೆಚ್. ಮಂಜುನಾಥ್

Suddi Udaya
error: Content is protected !!