August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಗ್ರಾಮೀಣ ಮಟ್ಟದ ಪುಸ್ತಕೋತ್ಸವ ಪುಸ್ತಕ ಪ್ರದರ್ಶನ ಮತ್ತು ಮಾರಾಟ

ಗುರುವಾಯನಕೆರೆ ಶ್ರೀ ಶಾರದಾ ಕಲಾಮಂಟಪ ಗೆಳೆಯರ ಬಳಗ ಇದರ ಆಶ್ರಯದಲ್ಲಿ ಜ್ಞಾನ ಗಂಗಾ ಪುಸ್ತಕ ಮಳಿಗೆ ಪುತ್ತೂರು ಇದರ ಸಹಯೋಗದೊಂದಿಗೆ ಜೂ.26ರಿಂದ 28 ರವರೆಗೆ ನಡೆಯುವ ಗ್ರಾಮೀಣ ಮಟ್ಟದ ಪುಸ್ತಕೋತ್ಸವ, ಪುಸ್ತಕ ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಶ್ರೀನಾಥ್ ಎಂ ಪಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡುತ್ತಾ, ಆಧುನಿಕ ತಂತ್ರಜ್ಞಾನದ ಭರಾಟೆಯಲ್ಲಿ ಪುಸ್ತಕ ಓದುವವರು ವಿರಳವಾಗುತ್ತಿದ್ದಾರೆ. ಇಂತಹ ಕಾಲಘಟ್ಟದಲ್ಲಿ ಗ್ರಾಮೀಣ ಮಟ್ಟದ ಪುಸ್ತಕೋತ್ಸವ ಆಯೋಜನೆಗೊಂಡಿರುವುದು ಶ್ಲಾಘನೀಯವಾಗಿದೆ. ಪ್ರತಿ ಶಾಲಾ ಕಾಲೇಜುಗಳಲ್ಲಿ ಇಂತಹ ಪುಸ್ತಕ ಪ್ರದರ್ಶನ ನಡೆದರೆ ವಿದ್ಯಾರ್ಥಿಗಳು ಓದುವ ಅಭಿರುಚಿಯನ್ನು ಹೊಂದಲು ಸಹಾಯಕವಾಗುತ್ತದೆ. ಗ್ರಾಮೀಣ ಮಟ್ಟದಲ್ಲಿ ಮನೆಮನೆಗೆ ಪುಸ್ತಕ ತಲುಪಿಸುವ ಯೋಜನೆಗಳು ಕಾರ್ಯಗತವಾಗಬೇಕಾಗಿದೆ ಎಂದರು.

ಮುಖ್ಯ ಅತಿಥಿಗಳಾದ ಪುಂಜಾಲಕಟ್ಟೆ ಸರಕಾರಿ ಪ್ರೌಢ ಶಾಲಾ ಶಿಕ್ಷಕರಾದ ಧರಣೇಂದ್ರ ಜೈನ್ ಮಾತನಾಡಿ, ವಿದ್ಯಾರ್ಥಿಗಳಿಗೆ ಪುಸ್ತಕ ಓದುವ ಅಭಿರುಚಿಯನ್ನು ಹೆಚ್ಚಿಸುವ ಸಲುವಾಗಿ ಕರ್ನಾಟಕ ಸರಕಾರವು ಕೆಲವೊಂದು ಯೋಜನೆಗಳನ್ನು ಹಾಕಿಕೊಂಡಿದ್ದು ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ. ಇದರಿಂದ ಬರಹಗಾರರು ಹಾಗೂ ಪುಸ್ತಕ ಪ್ರಕಟಿಸುವವರಿಗೆ ಸಹಾಯಕವಾಗುತ್ತದೆ ಎಂದರು.

ಗುರುವಾಯನಕೆರೆ ಶಾರದಾ ಗೆಳೆಯರ ಬಳಗದ ಅಧ್ಯಕ್ಷ ತಿಲಕರಾಜ್, ಶಾರದಾ ಭಜನ ಮಂಡಳಿಯ ನಿಕಟ ಪೂರ್ವ ಅಧ್ಯಕ್ಷ ಶ್ರೀಮತಿ ರೀತಾ ವೈ ಆಚಾರ್ಯ, ಕಾರ್ಯಕ್ರಮದ ಆಯೋಜಕ ದೇವಿಪ್ರಸಾದ್ ಆಚಾರ್ಯ ಗುರುವಾಯನಕೆರೆ, ಡಾ ವೇಣುಗೋಪಾಲ ಶರ್ಮ, ಕುವೆಟ್ಟು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಮಂಜುನಾಥ ಕುಂಬಳೆ ಉಪಸ್ಥಿತರಿದ್ದರು.
ಆನಂದ ಕೋಟ್ಯಾನ್ ಸ್ವಾಗತಿಸಿದರು. ಶ್ರೀಮತಿ ಸುಧಾ ಆರ್ ಸಾಲಿಯಾನ್ ಧನ್ಯವಾದವಿತ್ತರು. ಉಪನ್ಯಾಸಕ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಜೀವನ ಕೌಶಲ ತರಬೇತಿ ಕಾರ್ಯಾಗಾರ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 137.95 ಕೋಟಿ ವ್ಯವಹಾರ, ರೂ. 53.26 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 9.50 ಡಿವಿಡೆಂಟ್

Suddi Udaya

ನೀಟ್ ಪ್ರಶ್ನಾ ಪತ್ರಿಕೆ ಸೋರಿಕೆ: ವಿದ್ಯಾರ್ಥಿಗಳ ಹೋರಾಟವನ್ನು ಹತ್ತಿಕ್ಕುವುದು ಖಂಡನೀಯ -ಕೆ.ಎಂ. ನಾಗೇಶ್ ಕುಮಾರ್ ಗೌಡ

Suddi Udaya

ಜನಾರ್ಶೀವಾದದಿಂದ ಎರಡನೇ ಬಾರಿ ಶಾಸಕರಾಗಿ ಹರೀಶ್ ಪೂಂಜ ಆಯ್ಕೆ: ಕುತ್ಲೂರಿನಲ್ಲಿ ಕಾರ್ಯಕರ್ತರಿಂದ ಅದ್ಧೂರಿ ವಿಜಯೋತ್ಸವ

Suddi Udaya

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya
error: Content is protected !!