June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ ವಿವಿಧೆಡೆ ಸ್ವಚ್ಛತಾ ಶ್ರಮದಾನ ಹಾಗೂ ರಸ್ತೆ ಬದಿ ಅಪಾಯಕಾರಿ ತ್ಯಾಜ್ಯ ವಿಲೇವಾರಿ ಮಾಡಿದವರಿಗೆ ರೂ.5ಸಾವಿರ ದಂಡ

ಉಜಿರೆ: ಮಹಾತ್ಮ ಗಾಂಧಿ ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿರುವ ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ ಉಜಿರೆ ಗ್ರಾಮದ ವಿವಿಧ ಭಾಗಗಳಲ್ಲಿ ಸ್ವಚ್ಛತಾ ಶ್ರಮದಾನ ಹಾಗೂ ಅಕ್ರಮ ತ್ಯಾಜ್ಯ ವಿಲೇವಾರಿ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಯಿತು.

ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ, ಗೆಳೆಯರ ಬಳಗ ಮುಂಡತೋಡಿ, ಪ್ರಗತಿ ಯುವಕ ಮಂಡಲ ಮಾಚಾರು, ಸುಜ್ಞಾನ ಹಿರಿಯ ವಿಧ್ಯಾರ್ಥಿ ಸಂಘ ಬದನಾಜೆ, ಮುಹಿಯುದ್ದೀನ್ ಜುಮಾ ಮಸೀದಿ ಮಾಚಾರು , ಶ್ರೀ ಕೃಷ್ಣ ಭಜನಾ ಮಂಡಳಿ ಚಾವಡಿ ಇವುಗಳ ಸಹಭಾಗಿತ್ವದಲ್ಲಿ ಉಜಿರೆ–ಬೆಳಾಲು ರಸ್ತೆಯ ಮಾಚಾರು ಹಾಗೂ ಪೆರ್ಲ ಕಾಲೇಜು ರಸ್ತೆ ಪ್ರದೇಶಗಳಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ರಸ್ತೆ ಬದಿ ಬೆಳೆದಿದ್ದ ಕಳೆಗಿಡಗಳನ್ನು ತೆರವುಗೊಳಿಸಿ, ಪ್ಲಾಸ್ಟಿಕ್ ಸೇರಿದಂತೆ ವಿವಿಧ ತ್ಯಾಜ್ಯಗಳನ್ನು ಸಂಗ್ರಹಿಸಿ ಪರಿಸರವನ್ನು ಸ್ವಚ್ಛಗೊಳಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ, ಪಂಚಾಯತ್ ಸಿಬ್ಬಂದಿ ಹಾಗೂ ಸ್ವಚ್ಛತಾ ಕಾರ್ಮಿಕರ ಜಂಟಿ ಕಾರ್ಯಾಚರಣೆಯಲ್ಲಿ ರಸ್ತೆ ಬದಿಯಲ್ಲಿ ಅಕ್ರಮವಾಗಿ ಅಪಾಯಕಾರಿ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದ ಪ್ರಕರಣವನ್ನು ರೆಡ್‌ಹ್ಯಾಂಡ್ ಆಗಿ ಪತ್ತೆಹಚ್ಚಲಾಯಿತು.

ಪರಿಶೀಲನೆಯ ವೇಳೆ ಉಜಿರೆ ಡಯಾಗ್ನೊಸ್ಟಿಕ್ ಲ್ಯಾಬೋರೇಟರಿಯವರು ರಸ್ತೆ ಬದಿಯಲ್ಲಿ ಬಳಸಿದ ಸಿರಿಂಜ್‌ಗಳು, ಮಿಶ್ರ ತ್ಯಾಜ್ಯ ಹಾಗೂ ಇತರೆ ಅಪಾಯಕಾರಿ ತ್ಯಾಜ್ಯಗಳನ್ನು ಅಕ್ರಮವಾಗಿ ಎಸೆದಿರುವುದು ಕಂಡುಬಂದ ಹಿನ್ನೆಲೆಯಲ್ಲಿ, ಸಾರ್ವಜನಿಕ ಆರೋಗ್ಯ ಮತ್ತು ಪರಿಸರದ ಹಿತದೃಷ್ಟಿಯಿಂದ ಸಂಬಂಧಪಟ್ಟ ಸಂಸ್ಥೆಗೆ ತಕ್ಷಣವೇ ರೂ.5,000/- ದಂಡ ವಿಧಿಸಲಾಯಿತು.

ಗ್ರಾಮ ಪಂಚಾಯತ್ ಅಧಿಕಾರಿಗಳು ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿಯ ತ್ಯಾಜ್ಯ, ವಿಶೇಷವಾಗಿ ಅಪಾಯಕಾರಿ ತ್ಯಾಜ್ಯವನ್ನು ಅಕ್ರಮವಾಗಿ ವಿಲೇವಾರಿ ಮಾಡುವವರ ವಿರುದ್ಧ ಮುಂದೆಯೂ ಯಾವುದೇ ಮುಲಾಜಿಲ್ಲದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ತಮ್ಮ ತ್ಯಾಜ್ಯವನ್ನು ಮೂಲದಲ್ಲಿಯೇ ಪ್ರತ್ಯೇಕಿಸಿ, ಗ್ರಾಮ ಪಂಚಾಯತ್‌ನ ‘ಸ್ವಚ್ಛ ವಾಹಿನಿ’ ವಾಹನಕ್ಕೆ ಮಾತ್ರ ಹಸ್ತಾಂತರಿಸುವಂತೆ ಹಾಗೂ ಅಕ್ರಮ ತ್ಯಾಜ್ಯ ವಿಲೇವಾರಿ ಕಂಡುಬಂದಲ್ಲಿ ಪಂಚಾಯತ್‌ಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು.

ಸ್ವಚ್ಛತಾ ಶ್ರಮದಾನ ಕಾರ್ಯಕ್ರಮದಲ್ಲಿ ಮುಂಡತ್ತೋಡಿ ಶಾಲೆಯ ಮುಖ್ಯಶಿಕ್ಷಕಿ ಸೇವಂತಿ, ಗೆಳೆಯರ ಬಳಗದ ಅಧ್ಯಕ್ಷ ವೆಂಕಪ್ಪ, ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವಿನುತಾ, ಬದನಾಜೆ ಶಾಲೆಯ ಮುಖ್ಯಶಿಕ್ಷಕ ಗೋಪಾಲ, ಕೊಲ್ಪಾಡಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸುರೇಶ್, ಪ್ರಗತಿ ಯುವಕ ಮಂಡಳಿಯ ಪದಾಧಿಕಾರಿಗಳು, ಸುಜ್ಞಾನ ಹಿರಿಯ ವಿದ್ಯಾರ್ಥಿ ಸಂಘದ ಸೋಮಶೇಖರ್ ಹಾಗೂ ಅಕ್ಷಯ್, ಮಾಜಿ ಸದಸ್ಯರಾದ ಇಲಿಯಾಸ್, ಮುಹಿಯುದ್ದೀನ್ ಜುಮಾ ಮಸೀದಿಯ ಸದಸ್ಯರು, ಹಾಗೂ ಮಾಚಾರು ಮತ್ತು ಪೆರ್ಲ – ಮುಂಡತೋಡಿ ಪರಿಸರದ ನಾಗರಿಕರು ಸಕ್ರಿಯವಾಗಿ ಭಾಗವಹಿಸಿದರು.

ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛತಾ ಅಭಿಯಾನದಲ್ಲಿ ಸಾರ್ವಜನಿಕರು, ಸಂಘ-ಸಂಸ್ಥೆಗಳು ಹಾಗೂ ವ್ಯಾಪಾರಸ್ಥರು ಕೈಜೋಡಿಸಿ ಉಜಿರೆಯನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರ ಗ್ರಾಮವನ್ನಾಗಿ ರೂಪಿಸಲು ಸಹಕರಿಸುವಂತೆ ಮನವಿ ಮಾಡಲಾಗಿದೆ.

Related posts

ಎ.22-ಮೇ.20: ಮುಳಿಯ ಮಳಿಗೆಗಳಲ್ಲಿ ‘ಮುಳಿಯ ಚಿನ್ನೋತ್ಸವ ಸಂಭ್ರಮ’ ಗ್ರಾಹಕರ ನೆಚ್ಚಿನ ಚಿನ್ನಾಭರಣಗಳನ್ನು ಆಕರ್ಷಕ ಬೆಲೆಗೆ ಖರೀದಿಸಲು ಸುವರ್ಣವಕಾಶ

Suddi Udaya

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

Suddi Udaya

ರಬ್ಬರ್ ಬೆಳೆಗಾರರ ಸಮಸ್ಯೆ: ಕೇಂದ್ರ ಸರಕಾರಕ್ಕೆ ಹಕ್ಕೊತ್ತಾಯ ವರದಿ ಸಲ್ಲಿಕೆ

Suddi Udaya

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

Suddi Udaya

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

Suddi Udaya

ಬಿಕೆ ಹರಿಪ್ರಸಾದ್ ರವರಿಗೆ ಉಪಮುಖ್ಯಮಂತ್ರಿ ಸ್ಥಾನಮಾನ ನೀಡುವಂತೆ ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷರು,ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆ ಒತ್ತಾಯ

Suddi Udaya
error: Content is protected !!