August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಹಲಸು ಮತ್ತು ಹಣ್ಣಿನ ಮೇಳದ ಉದ್ಘಾಟನೆ

ಉಜಿರೆ: ರೋಟರಿ ಕ್ಲಬ್ ಬೆಳ್ತಂಗಡಿ, ಪ್ರೇರಣ ಸಂಜೀವಿನಿ ಮಹಿಳಾ ಒಕ್ಕೂಟ, ಬೆನಕ ಇವೆಂಟ್ಸ, ಉಜಿರೆ ಗ್ರಾಮ ಪಂಚಾಯತ್ ಜಂಟಿ ಆಶ್ರಯದಲ್ಲಿ ಉಜಿರೆಯಲ್ಲಿ ನಡೆಯುತ್ತಿರುವ ಹಲಸು ಮತ್ತು ಹಣ್ಣಿನ ಮೇಳವನ್ನು ರಿಬ್ಬನ್ ಕಟ್ ಮಾಡುವುದರ ಮೂಲಕ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೊ. ಡಾ ಪ್ರಕಾಶ ಪ್ರಭು ಇವರು ಉದ್ಘಾಟನೆ ಮಾಡಿದರು.

ಕೃಷಿಕರ ಹಾಗೂ ಕುಲ ಕಸುಬುಗಳ ಉತ್ಪನ್ನ ಹಾಗೂ ಸಣ್ಣ ವ್ಯಾಪಾರಿಗಳನ್ನು ಬೆಂಬಲಿಸಲು ಉಜಿರೆ ಗ್ರಾಮ ಹಾಗೂ ಸುತ್ತಮುತ್ತಲಿನ ಜನರು ಬರಬೇಕು ಎಂದು ಕರೆ ಕೊಟ್ಟರು. ಪ್ರೇರಣ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ವಿನುತ ರಂಜನ ಗೌಡ ಅವರು ದೀಪ ಬೆಳಗಿಸಿ ಶುಭ ಕೋರಿ, ತಮ್ಮ ಒಕ್ಕೂಟದ ಸದಸ್ಯರೂ ಇದರಲ್ಲಿ ಬಹಳ ಆಸಕ್ತಿಯಿಂದ ಸಹಕರಿಸುವುದಾಗಿ ಹೇಳಿದರು.

ಶ್ರೀ ಕೃಷ್ಣಾನುಗ್ರಹದಲ್ಲಿ ಜೂ. 26,27,28 ಬೆಳಗ್ಗೆ 10 ರಿಂದ ರಾತ್ರಿ 9:30 ವರೇಗೆ ನಡೆಯಲಿರುವ ಈ ಮೇಳದ ಸಂಕ್ಷಿಪ್ತ ಮಾಹಿತಿಯನ್ನು ಬೆನಕಾ ಇವೆಂಟ್ಸನ ಮಾಲಕ ಗಣೇಶ ಶೆಟ್ಟಿ ನೀಡಿದರು. ಅತಿಥಿ ರೊ. ಡಾ ಎಂ ಎಂ ದಯಾಕರರು ಹಲಸಿನ ಮತ್ತು ಹಣ್ಣಿನ ಕೃಷಿಕನಾಗಿ, ತಮ್ಮ ಅನುಭವವನ್ನು ಹಂಚಿಕೊಂಡರು.

ವೇದಿಕೆಯಲ್ಲಿ ಬೆನಕ ಇವೆಂಟ್ಸನ ಪದಾಧಿಕಾರಿಗಳಾದ ಭಾಸ್ಕರ ಪೂಜಾರಿ, ಶ್ರೀಧರ ಮರವಂತೆ, ಸಂದೇಶ ಮೊಗೇರರು ಉಪಸ್ಥಿತರಿದ್ದರು. ಆ್ಯನ್ ಡಾ ಅನಿತಾ ದಯಾಕರರು ಭಾಗವಹಿಸಿದರು. ಕಾರ್ಯಕ್ರಮವನ್ನು ರೋಟರಿ ಸದಸ್ಯ , ರಾಜ್ಯ ಪ್ರಶಸ್ತಿ ವಿಜೇತ ಬಿ. ಸೋಮಶೇಖರ ಶೆಟ್ಟಿ ನಿರೂಪಿಸಿದರು.

Related posts

ಬಸದಿಗಳಿಗೆ ಅನುದಾನ : ಸವಣಾಲು ಕ್ಷೇತ್ರದ ಬಸದಿಯ ಅಭಿವೃದ್ಧಿಗೆ ರೂ.9 ಲಕ್ಷ, ಪುದುವೆಟ್ಟು ಬಸದಿಗೆ ರೂ.50 ಲಕ್ಷ ಬಿಡುಗಡೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಮಚ್ಚಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಸಿಎಂ ಸಿದ್ದರಾಮಯ್ಯ ರಿಗೆ ಮನವಿ

Suddi Udaya

ಅ.13: ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಕನ್ಯಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣೆ ಶಿಬಿರ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ: ಅಭಿನಂದನಾ ಸಭೆ

Suddi Udaya

ನೆರಿಯಾ ಗ್ರಾಮದಲ್ಲಿ “ಮಲೆಕುಡಿಯ ಬುಡಕಟ್ಟು ಕುಟುಂಬಗಳೊಂದಿಗೆ ಶೈಕ್ಷಣಿಕ ವಿನಿಮಯ”

Suddi Udaya
error: Content is protected !!