June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಹಲಸು ಮತ್ತು ಹಣ್ಣಿನ ಮೇಳದ ಉದ್ಘಾಟನೆ

ಉಜಿರೆ: ರೋಟರಿ ಕ್ಲಬ್ ಬೆಳ್ತಂಗಡಿ, ಪ್ರೇರಣ ಸಂಜೀವಿನಿ ಮಹಿಳಾ ಒಕ್ಕೂಟ, ಬೆನಕ ಇವೆಂಟ್ಸ, ಉಜಿರೆ ಗ್ರಾಮ ಪಂಚಾಯತ್ ಜಂಟಿ ಆಶ್ರಯದಲ್ಲಿ ಉಜಿರೆಯಲ್ಲಿ ನಡೆಯುತ್ತಿರುವ ಹಲಸು ಮತ್ತು ಹಣ್ಣಿನ ಮೇಳವನ್ನು ರಿಬ್ಬನ್ ಕಟ್ ಮಾಡುವುದರ ಮೂಲಕ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೊ. ಡಾ ಪ್ರಕಾಶ ಪ್ರಭು ಇವರು ಉದ್ಘಾಟನೆ ಮಾಡಿದರು.

ಕೃಷಿಕರ ಹಾಗೂ ಕುಲ ಕಸುಬುಗಳ ಉತ್ಪನ್ನ ಹಾಗೂ ಸಣ್ಣ ವ್ಯಾಪಾರಿಗಳನ್ನು ಬೆಂಬಲಿಸಲು ಉಜಿರೆ ಗ್ರಾಮ ಹಾಗೂ ಸುತ್ತಮುತ್ತಲಿನ ಜನರು ಬರಬೇಕು ಎಂದು ಕರೆ ಕೊಟ್ಟರು. ಪ್ರೇರಣ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ವಿನುತ ರಂಜನ ಗೌಡ ಅವರು ದೀಪ ಬೆಳಗಿಸಿ ಶುಭ ಕೋರಿ, ತಮ್ಮ ಒಕ್ಕೂಟದ ಸದಸ್ಯರೂ ಇದರಲ್ಲಿ ಬಹಳ ಆಸಕ್ತಿಯಿಂದ ಸಹಕರಿಸುವುದಾಗಿ ಹೇಳಿದರು.

ಶ್ರೀ ಕೃಷ್ಣಾನುಗ್ರಹದಲ್ಲಿ ಜೂ. 26,27,28 ಬೆಳಗ್ಗೆ 10 ರಿಂದ ರಾತ್ರಿ 9:30 ವರೇಗೆ ನಡೆಯಲಿರುವ ಈ ಮೇಳದ ಸಂಕ್ಷಿಪ್ತ ಮಾಹಿತಿಯನ್ನು ಬೆನಕಾ ಇವೆಂಟ್ಸನ ಮಾಲಕ ಗಣೇಶ ಶೆಟ್ಟಿ ನೀಡಿದರು. ಅತಿಥಿ ರೊ. ಡಾ ಎಂ ಎಂ ದಯಾಕರರು ಹಲಸಿನ ಮತ್ತು ಹಣ್ಣಿನ ಕೃಷಿಕನಾಗಿ, ತಮ್ಮ ಅನುಭವವನ್ನು ಹಂಚಿಕೊಂಡರು.

ವೇದಿಕೆಯಲ್ಲಿ ಬೆನಕ ಇವೆಂಟ್ಸನ ಪದಾಧಿಕಾರಿಗಳಾದ ಭಾಸ್ಕರ ಪೂಜಾರಿ, ಶ್ರೀಧರ ಮರವಂತೆ, ಸಂದೇಶ ಮೊಗೇರರು ಉಪಸ್ಥಿತರಿದ್ದರು. ಆ್ಯನ್ ಡಾ ಅನಿತಾ ದಯಾಕರರು ಭಾಗವಹಿಸಿದರು. ಕಾರ್ಯಕ್ರಮವನ್ನು ರೋಟರಿ ಸದಸ್ಯ , ರಾಜ್ಯ ಪ್ರಶಸ್ತಿ ವಿಜೇತ ಬಿ. ಸೋಮಶೇಖರ ಶೆಟ್ಟಿ ನಿರೂಪಿಸಿದರು.

Related posts

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆ

Suddi Udaya

ನಾಲ್ಕೂರು: ಬಾರ್ದೋಟ್ಟು ನಿವಾಸಿ ಬಾಲಕೃಷ್ಣ ಪೂಜಾರಿ ನಿಧನ

Suddi Udaya

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya
error: Content is protected !!