August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ಮಹಾಸಭೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ

ಬೆಳ್ತಂಗಡಿ : ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ ನೇತೃತ್ವದಲ್ಲಿ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ‌ಹಾಗೂ ಒಕ್ಕೂಟ ಬಲವರ್ಧನೆ ತರಬೇತಿಯನ್ನು ಜೂ.25 ರಂದು ಸಾನ್ತೋಮ್ ಟವರ್ ಬೆಳ್ತಂಗಡಿ ಇಲ್ಲಿ ಆಯೋಜಿಸಲಾಗಿತ್ತು.

ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಎಲಿಯಮ್ಮ ತೋಮಸ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಮಹಿಳಾ ಸಬಲೀಕರಣ ಯೋಜನೆಯ ಸಂಯೋಜಕಿ ಶ್ರೀಮತಿ ಸಿಸಿಲ್ಯಾ ತಾವ್ರೊರವರು ಒಕ್ಕೂಟಗಳ ಸದಸ್ಯರು ನಾಯಕತ್ವ ವಹಿಸಿ ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಲು ಮುಂದಾಗಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು. ಡಿ.ಕೆ.ಆರ್. ಡಿ. ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾ| ಆದರ್ಶ್ ಪಿ.ಎಸ್ ರವರು ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ಸಮಿತಿ ಸದಸ್ಯರ ಜವಾಬ್ದಾರಿಗಳು ಮತ್ತು ಕರ್ತವ್ಯಗಳು ಮತ್ತು ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡಿದರು. 2026 ರಿಂದ 2029 ರವರೆಗಿನ ಸ್ನೇಹ ಕಿರಣ್ ಜಿಲ್ಲಾ ಒಕ್ಕೂಟದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಉಷಾ ಜೋಯ್, ಉಪಾಧ್ಯಕ್ಷರಾಗಿ ಫಿಲೋಮಿನ ಸಿಜೆ, ಕಾರ್ಯದರ್ಶಿಯಾಗಿ ವೈಶಾಲಿ, ಜೊತೆ ಕಾರ್ಯದರ್ಶಿಯಾಗಿ ಚಂದನ ಕೋಶಾಧಿಕಾರಿಯಾಗಿ ಮಂಜುಳ ಜಾನ್ ಹಾಗೂ ಸಮಿತಿ ಸದಸ್ಯರಾಗಿ ಮಿನಿ ತೋಮಸ್, ಉಷಾ, ಡೈಸಿ, ಪ್ರಿನ್ಸಿ ಇವರನ್ನು ಆಯ್ಕೆ ಮಾಡಲಾಯಿತು. ಪ್ರಿನ್ಸಿ ಸ್ವಾಗತಿಸಿ, ಜಿನ್ಸಿ ರಾಜೇಶ್ ವಂದಿಸಿದರು. ಸ್ನೇಹ ಕಿರಣ್ ಒಕ್ಕೂಟದ 18 ಸದಸ್ಯರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಸರ್ವಜ್ಞ ಜಯಂತಿ ಆಚರಣೆ:

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಆಚರಣೆ

Suddi Udaya

ತೆಕ್ಕಾರು: ಮನೆಯ ಪಕ್ಕದ ಬರೆ ಕುಸಿತ: ಮನೆಗೆ ಹಾನಿ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಬೇಸಿಗೆ ಶಿಬಿರ

Suddi Udaya
error: Content is protected !!