August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನದ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಔಷಧ ವ್ಯಾಪಾರಸ್ಥರ ಸಂಘದ ಆಶ್ರಯದಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನದ ಆಚರಣೆಯನ್ನು ಬೆಳ್ತಂಗಡಿಯಲ್ಲಿ ಆಚರಿಸಲಾಯಿತು. ಅಯ್ಯಪ್ಪ ಗುಡಿಯಿಂದ ಜಾಥಾ ಮೂಲಕ ಅಂಬೇಡ್ಕರ್ ಭವನಕ್ಕೆ -ಸಾಗಿತು, ಮೆರವಣಿಗೆಯಲ್ಲಿ ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಂಚಾರಿ ದಳದ ಪೊಲೀಸ್ ಸಿಬ್ಬಂದಿ ಜಾಥಾದಲ್ಲಿ ಪಾಲ್ಗೊಂಡರು.

ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಕ ಬಾಬು ಬಿ ಎನ್, ಪ್ರಸನ್ನ ಫಾರ್ಮಸಿ ಕಾಲೇಜಿನ ಪ್ರಿನ್ಸಿಪಾಲ್ ಮಲ್ಲಿಕಾರ್ಜುನ ಗೌಡ, ಸಂಚಾರಿ ದಳದ ಎಸ್.ಐ ಲಿಂಗಪ್ಪ, ಯುವ ವಿದ್ಯಾರ್ಥಿ ಗಳಿಗೆ ಮಾದಕ ದ್ರವ್ಯದ ಬಗ್ಗೆ ತಿಳಿ ಹೇಳಿದರು.

ಸಂಘದ ಅಧ್ಯಕ್ಷ ಉದಯ ಕುಮಾರ್ ಜೈನ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಪ್ರಕಾಶ್ ಫೆರ್ನಾಂಡೀಸ್ ವಂದಿಸಿದರು.
ಡಾ. ಸೌಮ್ಯ ಬೆಳಾಲು ಕಾರ್ಯಕ್ರಮ ಸಂಯೋಜಿಸಿದರು.

Related posts

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ: ರಬ್ಬರ್ ಇಂಡಿಯಾ ಸಂಸ್ಥೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಲಾಯಿಲ : ಕುಲೆಂಜಿಲೋಡಿ ಅಯೋಧ್ಯ ನಗರ ಭಾಗದಲ್ಲಿ ತೀವ್ರ ವಿದ್ಯುತ್ ಸಮಸ್ಯೆ: ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾ.ಪಂ. ನಿಂದ ಮನವಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಕರಾಯ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!