August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ – ಶಾಲಾ ಅಭಿವೃದ್ಧಿ ಸಮಿತಿ ರಚನೆ

ಸವಣಾಲು: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ಶಾಲಾಭಿವೃದ್ಧಿಯ ನೂತನ ಸಮಿತಿ ಅಧ್ಯಕ್ಷರಾಗಿ ಮಧುಚಂದ್ರ ಗೌಡ , ಉಪಾಧ್ಯಕ್ಷರಾಗಿ ಅಬ್ದುಲ್ ಹಮೀದ್ ಮತ್ತು ಶ್ರೀಮತಿ ಪುಷ್ಪಾ ಅವರು ಸರ್ವಾನುಮತದಿಂದ ಆಯ್ಕೆಯಾದರು. ಇನ್ನುಳಿದಂತೆ ಸವಿತಾ, ಸತ್ಯಶಂಕರ್ ಭಟ್, ಯೋಗೀಶ್, ರಾಜು, ತಾರ, ಪ್ರಕಾಶ್, ರಂಜಿತ್, ಶ್ಯಾಮ್ ನಾಯಕ್, ಗೀತಾ, ಪ್ರೇಮ, ಹರಿಣಾಕ್ಷಿ ಝರೀನಾ, ಪೌಝಿಯಾ, ಲೀಲಾವತಿ, ರುಕಿಯಾ ಅವರುಗಳನ್ನು ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಲಾ ನಿಕಟಪೂರ್ವ ಮುಖ್ಯ ಗುರುಗಳಾದ ಮಂಜುನಾಥ ಜಿ ಮತ್ತು ಶಾಲಾ ಹಿರಿಯ ವಿದ್ಯಾರ್ಥಿ ರಾಜೇಶ್ ಕೆ, ಆಡಳಿತ ಮಂಡಳಿಯ ಅಧ್ಯಕ್ಷ ದಯಾನಂದ ರೈ ಕಡೆಮಜಲು ಉಪಸ್ಥಿತರಿದ್ದು ನೂತನ ಪದಾಧಿಕಾರಿಗಳಿಗೆ ಶುಭವನ್ನು ಹಾರೈಸಿದರು. ಕಾರ್ಯಕ್ರಮವು ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಕೂಸಪ್ಪ ಗೌಡ ಸ್ವಾಗತಿಸಿದರು. ಶಿಕ್ಷಕಿ ಮಮತಾ ನಿರೂಪಿಸಿದರು. ಕಾರ್ಯಕ್ರಮಕ್ಕೆ ಆಡಳಿತ ಮಂಡಳಿಯ ಸದಸ್ಯ ಶಿವಪ್ರಸಾದ್ ವಂದಿಸಿದರು.

Related posts

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಹಿಮಾನ್ಸ್ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

Suddi Udaya

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಯೋಗೀಶ್ ಕುಮಾರ್ ನಡಕ್ಕರ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಆಯ್ಕೆ

Suddi Udaya
error: Content is protected !!