June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ – ಶಾಲಾ ಅಭಿವೃದ್ಧಿ ಸಮಿತಿ ರಚನೆ

ಸವಣಾಲು: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ಶಾಲಾಭಿವೃದ್ಧಿಯ ನೂತನ ಸಮಿತಿ ಅಧ್ಯಕ್ಷರಾಗಿ ಮಧುಚಂದ್ರ ಗೌಡ , ಉಪಾಧ್ಯಕ್ಷರಾಗಿ ಅಬ್ದುಲ್ ಹಮೀದ್ ಮತ್ತು ಶ್ರೀಮತಿ ಪುಷ್ಪಾ ಅವರು ಸರ್ವಾನುಮತದಿಂದ ಆಯ್ಕೆಯಾದರು. ಇನ್ನುಳಿದಂತೆ ಸವಿತಾ, ಸತ್ಯಶಂಕರ್ ಭಟ್, ಯೋಗೀಶ್, ರಾಜು, ತಾರ, ಪ್ರಕಾಶ್, ರಂಜಿತ್, ಶ್ಯಾಮ್ ನಾಯಕ್, ಗೀತಾ, ಪ್ರೇಮ, ಹರಿಣಾಕ್ಷಿ ಝರೀನಾ, ಪೌಝಿಯಾ, ಲೀಲಾವತಿ, ರುಕಿಯಾ ಅವರುಗಳನ್ನು ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಲಾ ನಿಕಟಪೂರ್ವ ಮುಖ್ಯ ಗುರುಗಳಾದ ಮಂಜುನಾಥ ಜಿ ಮತ್ತು ಶಾಲಾ ಹಿರಿಯ ವಿದ್ಯಾರ್ಥಿ ರಾಜೇಶ್ ಕೆ, ಆಡಳಿತ ಮಂಡಳಿಯ ಅಧ್ಯಕ್ಷ ದಯಾನಂದ ರೈ ಕಡೆಮಜಲು ಉಪಸ್ಥಿತರಿದ್ದು ನೂತನ ಪದಾಧಿಕಾರಿಗಳಿಗೆ ಶುಭವನ್ನು ಹಾರೈಸಿದರು. ಕಾರ್ಯಕ್ರಮವು ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಕೂಸಪ್ಪ ಗೌಡ ಸ್ವಾಗತಿಸಿದರು. ಶಿಕ್ಷಕಿ ಮಮತಾ ನಿರೂಪಿಸಿದರು. ಕಾರ್ಯಕ್ರಮಕ್ಕೆ ಆಡಳಿತ ಮಂಡಳಿಯ ಸದಸ್ಯ ಶಿವಪ್ರಸಾದ್ ವಂದಿಸಿದರು.

Related posts

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ: ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಸಹಕಾರಿ ಕ್ಷೇತ್ರದ ಧುರೀಣರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್‌ನ ಹಾರ್ದಿಕ ಶುಭಾಶಯ

Suddi Udaya

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

Suddi Udaya

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya

ಶಬರಿಮಲೆ ಯಾತ್ರೆ ವೇಳೆ ರೈಲಿನಿಂದ ಬಿದ್ದು ವೃದ್ಧ ಸಾವು

Suddi Udaya

ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗೆ ಅವಮಾನ, ಸಂವಿಧಾನದ ಮೇಲಿನ ದಾಳಿ: ಸಂತೋಷ್ ಕುಮಾರ್ ಲಾಯಿಲ ಖಂಡನೆ

Suddi Udaya
error: Content is protected !!