June 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ದಿನಾಚರಣೆ ಹಾಗೂ ನಶಾಮುಕ್ತ ಭಾರತ ಪ್ರತಿಜ್ಞಾವಿಧಿ ಬೋಧನೆ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ (ರಿ).ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್
ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿ ನ ಪದವಿಪೂರ್ವ ವಿಭಾಗದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ಮತ್ತು ವ್ಯಸನ ನಿವಾರಣೆ ಮತ್ತು ನಿಯಂತ್ರಣ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಸಂಪನ್ಮೂಲಗಳ ವ್ಯಕ್ತಿಯಾಗಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ವಿಂದ್ಯಾಶ್ರೀ.ಎ ಮಾತನಾಡಿ ಭವಿಷ್ಯದ ಆಶಾಕಿರಣ ಯುವಜನತೆಯನ್ನು ಆವರಿಸಿಕೊಂಡಿರುವ ಮಾದಕ ದ್ರವ್ಯ ಗಳು ಒಂದು ಗಂಭೀರ ಹಾಗೂ ಜಾಗತಿಕ ಸಮಸ್ಯೆ ಯಾಗಿ ಹೊಸ ಪಿಡುಗುಗಳಾಗಿ ಸಮಾಜದ ಸ್ವಾಸ್ಥ್ಯವನ್ನು ಕೆಡುಸುತ್ತಿರುವುದು ನಿಜಕ್ಕೂ ಆತಂಕಕಾರಿ ಹಾಗೂ ನಾವೆಲ್ಲರೂ ಒಟ್ಟಾಗಿ ಸಮಾಜವನ್ನು ಸಬಲೀಕರಣಗೊಳಿಸೋಣ, ಮಾದಕ ದ್ರವ್ಯಗಳನ್ನು ತ್ಯಜಸೋಣ ಮತ್ತು ಆರೋಗ್ಯಕರ ಭಾರತವನ್ನು ನಿರ್ಮಿಸೋಣ ಎಂದು ಕರೆ ನೀಡಿದರು.


ಮಾದಕ ವಸ್ತು ಸೇವನೆ ಮಾಡದಿರಲು ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು.
ವಿದ್ಯಾಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ ನಾಯಕ್, ಪದವಿ ವಿಭಾಗದ ಮುಖ್ಯಸ್ಥೆಯಾದ ದೀಕ್ಷಿತಾ , ಪದವಿ ಪೂರ್ವ ವಿಭಾಗದ ಮುಖ್ಯಸ್ಥೆಯಾದ ಶ್ರೀಮತಿ ಸೌಮ್ಯ ಎನ್ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.
ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

Suddi Udaya

ಅರಣ್ಯ ಇಲಾಖೆಯ ಸಹಯೋಗದಲ್ಲಿ ರಸ್ತೆ ನಿರ್ಮಾಣ ಆಗಲಿ :ಮೋಹನ್ ಗೌಡ ಕಲ್ಮoಜ

Suddi Udaya

ಮೊಗ್ರು: ಮುಗೇರಡ್ಕ ದೈವಸ್ಥಾನದ ವತಿಯಿಂದ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಶಿಶುಮಂದಿರಕ್ಕೆ ಸ್ಮಾರ್ಟ್ ಎಲ್.ಇ.ಡಿ ಟಿವಿ ಕೊಡುಗೆ

Suddi Udaya

ಕಡಿತಗೊಂಡಿದ್ದ ಅಂಬಡಬೆಟ್ಟು ತಾತ್ಕಾಲಿಕ ರಸ್ತೆಗೆ ಶಾಸಕ ಹರೀಶ್ ಪೂಂಜರ ಸ್ಪಂದನೆ

Suddi Udaya

ಮಲವಂತಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ವೀರಗಾಥ 3.0 ಪ್ರಾಜೆಕ್ಟ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಹಲವಾರು ಪ್ರಶಸ್ತಿ

Suddi Udaya
error: Content is protected !!