23.6 C
ಪುತ್ತೂರು, ಬೆಳ್ತಂಗಡಿ
June 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆಲ್ಯಾಡಿಯಲ್ಲಿ ಉದನೆ ವಲಯ ಮಟ್ಟದ ಮಾತೃಸಂಗಮ ‘ಫಿದೆಲಿಯುಂ–2026’

ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಉದನೆ ವಲಯ ಮಟ್ಟದ ಮಾತೆಯರ ಒಕ್ಕೂಟದ ವಾರ್ಷಿಕ ಮಾತೃಸಂಗಮ ‘ಫಿದೆಲಿಯುಂ–2026’ ಕಾರ್ಯಕ್ರಮವು ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ವಂದನೀಯ ಫಾ. ಜೋಬಿ ಪುಲ್ಲಾಟ್ ಉದ್ಘಾಟಿಸಿ, ಉತ್ತಮ ಸಮಾಜ ಮತ್ತು ಕುಟುಂಬ ನಿರ್ಮಾಣದಲ್ಲಿ ಮಾತೆಯರ ಧಾರ್ಮಿಕ ಹಾಗೂ ಮೌಲ್ಯಾಧಾರಿತ ಪಾತ್ರದ ಮಹತ್ವವನ್ನು ಹೇಳಿದರು. ಇಂದಿನ ಮಕ್ಕಳ ಬೆಳವಣಿಗೆಯಲ್ಲಿ ಮಾತೆಯರು ಪ್ರೇರಕಶಕ್ತಿಯಾಗಿ ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ನಾಲ್ಕು ಮತ್ತು ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ದಂಪತಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಫಾ. ರಿಜೊ ಒಡೋಪಲ್ಲಿ, ಸಿಸ್ಟರ್ ಲಿಸ್ ಮ್ಯಾಥ್ಯೂ ಎಸ್.ಎಚ್., ರೇಖಾ ಅಡ್ಡಹೊಳೆ, ಸಿಮಿ ಆರ್ಲ, ಸುಜಾ ಜೇಮ್ಸ್ ಹಾಗೂ ಫಾ. ಶಾಜಿ ಮ್ಯಾಥ್ಯೂ ವಿವಿಧ ವಿಚಾರಗಳನ್ನು ಮಂಡಿಸಿದರು.

ಮಿನಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ನೆಲ್ಯಾಡಿ, ಆರ್ಲ, ಇಚಿಲಂಪಾಡಿ, ಉದನೆ, ಶಿರಾಡಿ, ಅಡ್ಡಹೊಳೆ ಹಾಗೂ ಅರಸೀನಮಕ್ಕಿ ಚರ್ಚ್‌ಗಳ ಮಾತೆಯರು ಭಾಗವಹಿಸಿದರು.

Related posts

ಉಜಿರೆ ಶ್ರೀ. ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿ ರಾಜ ಕೇಸರಿ ಸಂಘಟನೆಯಿಂದ ಸ್ವಚ್ಛತಾ ಕಾರ್ಯ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

Suddi Udaya

ಪುದುವೆಟ್ಟು: ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಫೆ.3: ಬೆಳ್ತಂಗಡಿ ವಕೀಲರು ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬೆಳಾಲು ಶ್ರೀ ಮಾಯ ಮಹಾದೇವ ದೇವಸ್ಥಾನದ ‘ಮಹಾಪ್ರಸಾದ’ ಕೈಪಿಡಿ ಬಿಡುಗಡೆ

Suddi Udaya
error: Content is protected !!