23.3 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಜಿಲ ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ, ಪೋಷಕರಿಂದ ಮಾದರಿ ಶಾಲಾ ಕೈತೋಟ ನಿರ್ಮಾಣ

​ ಬೆಳ್ತಂಗಡಿ: ಬಜಿಲ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇತ್ತೀಚೆಗೆ ಶಾಲಾ ಪೋಷಕರಿಂದ ಶ್ರಮದಾನ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.

ಪೋಷಕರು ಶಾಲಾ ಆವರಣದಲ್ಲಿದ್ದ ಕಳೆಗಿಡಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿದರು. ನಂತರ ಶಾಲಾ ಕೈತೋಟವನ್ನು (Kitchen Garden) ವ್ಯವಸ್ಥಿತವಾಗಿ ರಚಿಸಿ, ಅದರಲ್ಲಿ ಮಕ್ಕಳ ಮಧ್ಯಾಹ್ನದ ಬಿಸಿಯೂಟಕ್ಕೆ ಉಪಯುಕ್ತವಾಗುವಂತಹ ಬಸಳೆ, ಬೆಂಡೆಕಾಯಿ, ಅಲಸಂಡೆ ಸೇರಿದಂತೆ ವಿವಿಧ ಬಗೆಯ ಪೌಷ್ಟಿಕಾಂಶಯುಕ್ತ ತರಕಾರಿ ಬೀಜಗಳನ್ನು ಬಿತ್ತಿ ಮಾದರಿ ಕೈತೋಟ ಮಾಡಿದರು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಹರೀಶ್ ಗೌಡ ಅವರ ನೇತೃತ್ವದಲ್ಲಿ ಈ ಶ್ರಮದಾನ ಕಾರ್ಯಕ್ರಮ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಶ್ರಮದಾನದಲ್ಲಿ ಪಾಲ್ಗೊಂಡರು.

Related posts

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ವೇಣೂರು ಪೊಲೀಸ್ ಠಾಣೆ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಅರಿವು ಕಾರ್ಯಕ್ರಮ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶ : ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ 596 ಅಂಕಗಳೊಂದಿಗೆ ರಾಜ್ಯಕ್ಕೆ 4 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆ ಹುಡುಗರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆಯಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಅಭಿಯಾನ

Suddi Udaya
error: Content is protected !!