28.6 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವವಾಹಿನಿ ವೇಣೂರು ಘಟಕದ ವಿನೂತನ ಯೋಜನೆ “ಬೆಳಕು” ಕಾರ್ಯಕ್ರಮ

ವೇಣೂರು : ಯುವವಾಹಿನಿ ವೇಣೂರು ವಿನೂತನ ಯೋಜನೆ “ಬೆಳಕು” ಕಾರ್ಯಕ್ರಮ ಜೂ.26 ರಂದು ಪೇರಿ – ಹೊಸಂಗಡಿ ಶ್ರೀ ಶಾರದಾಂಭ ಭಜನಾ ಮಂದಿರದಲ್ಲಿ ನಡೆಯಿತು. ಸಭೆಯು ಮೊದಲಿಗೆ ಪ್ರಾರ್ಥನೆಯೊಂದಿಗೆ ಆರಂಭಗೊಂಡು ನಂತರ ಸದಸ್ಯತ್ವ ಮತ್ತು ಆಸರೆ ಯೋಜನೆಯ ಬಗ್ಗೆ ಚರ್ಚಿಸಿ ಬಡ ಕುಟುಂಬದ ವಿದ್ಯಾರ್ಥಿಗೆ ಸಹಾಯಧನ ಕೊಡುವುದುದೆಂದು ನಿರ್ಧರಿಸಲಾಯಿತು.

ಘಟಕದ ಕೋಶಾಧಿಕಾರಿ ಸತೀಶ್ ಚಿಗುರು ಇವರ ಪ್ರಾಯೋಜಕತ್ವದಲ್ಲಿ ಕೊಡಮಾಡಲ್ಪಟ್ಟ ಶ್ರೀಮತಿ ಬೇಬಿ ಪೇರಿ -ಹೊಸಂಗಡಿ ಬೆಳ್ತಂಗಡಿ ತಾಲೂಕು ಇವರ ಮನೆಗೆ ಉಚಿತ ವಿದ್ಯುತ್ ಸಂಪರ್ಕಕ್ಕೆ ಘಟಕದ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ನಾರಾವಿ, ಕಾರ್ಯದರ್ಶಿ ಶ್ರೀಮತಿ ದಕ್ಷಾ ಅಂಬಲಾ ಅಂಡಿಂಜೆ, ಮಾಜಿ ಅಧ್ಯಕ್ಷರುಗಳಾದ ನಿತೀಶ್ ಹೆಚ್, ನವೀನ್ ಪಚ್ಚೇರಿ, ಅರುಣ್ ಕೋಟ್ಯಾನ್, ಶುಭಕರ ಪೂಜಾರಿ ಸಾವ್ಯ ಮತ್ತು ವೇಣೂರು ಬಿಲ್ಲವ ಸಂಘದ ಅಧ್ಯಕ್ಷರಾದ ಹರೀಶ್ ಕುಮಾರ್ ಪೊಕ್ಕಿ, ಘಟಕದ ಸಲಹೆಗರಾದ ರಾಕೇಶ್ ಮೂಡುಕೋಡಿ, ಪೇರಿ -ಹೊಸಂಗಡಿ ಶ್ರೀ ಶಾರದಾಂಭ ಭಜನ ಮಂದಿರದ ಅಧ್ಯಕ್ಷರಾದ ಆನಂದ್ ಬಂಗೇರ ಮತ್ತು ಕಾರ್ಯದರ್ಶಿ ಸುಜಿತ್ ಕುಮಾರ್ , ಸದಸ್ಯರಾದ , ರಶ್ಮಿ ಹರಿಪ್ರಸಾದ್, ಘಟಕದ ಪ್ರವೀಣ್ ಕೋಟ್ಯಾನ್ ನಾರಾವಿ, , ಮಹಿಳಾ ನಿರ್ದೇಶಕರುಗಳಾದ ಗುಣವತಿ ಡಿ, ಜಯಂತಿ, ಸಂಗಮ್ ಪೇರಿ, ಸೂರಜ್ ಪೇರಿ, ಅಂಕಿತ್ ಬಂಗೇರ ಕೊಡಿಂಗೇರಿ, ಬಾಬು ಕೋಟ್ಯಾನ್, ಸನತ್, ಸಂದೀಪ್, ಸಂದೇಶ್ ಹಾಗೂ ಪದಾಧಿಕಾರಿಗಳ ಉಪಸ್ಥಿತಿ ಯಲ್ಲಿ ಚಾಲನೆಯನ್ನು ನೀಡುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.

ಘಟಕದ ಕೋಶಾಧಿಕಾರಿ ಸತೀಶ್ ಚಿಗುರು ಇವರನ್ನು ಪೇರಿ -ಹೊಸಂಗಡಿ ಶ್ರೀ ಶಾರದಾಂಭ ಭಜನ ಮಂದಿರದ ಪರವಾಗಿ ಸನ್ಮಾನಿಸಲಾಯಿತು.

ಘಟಕದ ವ್ಯಕ್ತಿತ್ವ ವಿಕಾಸನ ನಿರ್ದೇಶಕರಾದ ಸುಜಿತ್ ಕುಮಾರ್ ಸ್ವಾಗತಿಸಿ, ಘಟಕದ ಕಾರ್ಯದರ್ಶಿ ಶ್ರೀಮತಿ ದಕ್ಷಾ ಅಂಬಲ ಧನ್ಯವಾದವಿತ್ತರು.

Related posts

ಕಳೆಂಜ: ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ನೆರಿಯ ಆಲಂಗಾಯಿಗೆ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಆಶ್ರಮ ಶಾಲೆಗೆ ಶಿಲಾನ್ಯಾಸ

Suddi Udaya

ಧರ್ಮಸ್ಥಳ ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ಪ್ರಾಚೀನ ಭಾರತದ ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಬೊಟ್ಟುಗುಡ್ಡೆ ನಿವಾಸಿ ಶ್ರೀಮತಿ ಕಮಲ ಸಫಲ್ಯ ನಿಧನ

Suddi Udaya

ಸೇವಾಭಾರತಿ ತಂಡದಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕೊಯ್ಯೂರು ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ

Suddi Udaya
error: Content is protected !!