June 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವವಾಹಿನಿ ವೇಣೂರು ಘಟಕದ ವಿನೂತನ ಯೋಜನೆ “ಬೆಳಕು” ಕಾರ್ಯಕ್ರಮ

ವೇಣೂರು : ಯುವವಾಹಿನಿ ವೇಣೂರು ವಿನೂತನ ಯೋಜನೆ “ಬೆಳಕು” ಕಾರ್ಯಕ್ರಮ ಜೂ.26 ರಂದು ಪೇರಿ – ಹೊಸಂಗಡಿ ಶ್ರೀ ಶಾರದಾಂಭ ಭಜನಾ ಮಂದಿರದಲ್ಲಿ ನಡೆಯಿತು. ಸಭೆಯು ಮೊದಲಿಗೆ ಪ್ರಾರ್ಥನೆಯೊಂದಿಗೆ ಆರಂಭಗೊಂಡು ನಂತರ ಸದಸ್ಯತ್ವ ಮತ್ತು ಆಸರೆ ಯೋಜನೆಯ ಬಗ್ಗೆ ಚರ್ಚಿಸಿ ಬಡ ಕುಟುಂಬದ ವಿದ್ಯಾರ್ಥಿಗೆ ಸಹಾಯಧನ ಕೊಡುವುದುದೆಂದು ನಿರ್ಧರಿಸಲಾಯಿತು.

ಘಟಕದ ಕೋಶಾಧಿಕಾರಿ ಸತೀಶ್ ಚಿಗುರು ಇವರ ಪ್ರಾಯೋಜಕತ್ವದಲ್ಲಿ ಕೊಡಮಾಡಲ್ಪಟ್ಟ ಶ್ರೀಮತಿ ಬೇಬಿ ಪೇರಿ -ಹೊಸಂಗಡಿ ಬೆಳ್ತಂಗಡಿ ತಾಲೂಕು ಇವರ ಮನೆಗೆ ಉಚಿತ ವಿದ್ಯುತ್ ಸಂಪರ್ಕಕ್ಕೆ ಘಟಕದ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ನಾರಾವಿ, ಕಾರ್ಯದರ್ಶಿ ಶ್ರೀಮತಿ ದಕ್ಷಾ ಅಂಬಲಾ ಅಂಡಿಂಜೆ, ಮಾಜಿ ಅಧ್ಯಕ್ಷರುಗಳಾದ ನಿತೀಶ್ ಹೆಚ್, ನವೀನ್ ಪಚ್ಚೇರಿ, ಅರುಣ್ ಕೋಟ್ಯಾನ್, ಶುಭಕರ ಪೂಜಾರಿ ಸಾವ್ಯ ಮತ್ತು ವೇಣೂರು ಬಿಲ್ಲವ ಸಂಘದ ಅಧ್ಯಕ್ಷರಾದ ಹರೀಶ್ ಕುಮಾರ್ ಪೊಕ್ಕಿ, ಘಟಕದ ಸಲಹೆಗರಾದ ರಾಕೇಶ್ ಮೂಡುಕೋಡಿ, ಪೇರಿ -ಹೊಸಂಗಡಿ ಶ್ರೀ ಶಾರದಾಂಭ ಭಜನ ಮಂದಿರದ ಅಧ್ಯಕ್ಷರಾದ ಆನಂದ್ ಬಂಗೇರ ಮತ್ತು ಕಾರ್ಯದರ್ಶಿ ಸುಜಿತ್ ಕುಮಾರ್ , ಸದಸ್ಯರಾದ , ರಶ್ಮಿ ಹರಿಪ್ರಸಾದ್, ಘಟಕದ ಪ್ರವೀಣ್ ಕೋಟ್ಯಾನ್ ನಾರಾವಿ, , ಮಹಿಳಾ ನಿರ್ದೇಶಕರುಗಳಾದ ಗುಣವತಿ ಡಿ, ಜಯಂತಿ, ಸಂಗಮ್ ಪೇರಿ, ಸೂರಜ್ ಪೇರಿ, ಅಂಕಿತ್ ಬಂಗೇರ ಕೊಡಿಂಗೇರಿ, ಬಾಬು ಕೋಟ್ಯಾನ್, ಸನತ್, ಸಂದೀಪ್, ಸಂದೇಶ್ ಹಾಗೂ ಪದಾಧಿಕಾರಿಗಳ ಉಪಸ್ಥಿತಿ ಯಲ್ಲಿ ಚಾಲನೆಯನ್ನು ನೀಡುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.

ಘಟಕದ ಕೋಶಾಧಿಕಾರಿ ಸತೀಶ್ ಚಿಗುರು ಇವರನ್ನು ಪೇರಿ -ಹೊಸಂಗಡಿ ಶ್ರೀ ಶಾರದಾಂಭ ಭಜನ ಮಂದಿರದ ಪರವಾಗಿ ಸನ್ಮಾನಿಸಲಾಯಿತು.

ಘಟಕದ ವ್ಯಕ್ತಿತ್ವ ವಿಕಾಸನ ನಿರ್ದೇಶಕರಾದ ಸುಜಿತ್ ಕುಮಾರ್ ಸ್ವಾಗತಿಸಿ, ಘಟಕದ ಕಾರ್ಯದರ್ಶಿ ಶ್ರೀಮತಿ ದಕ್ಷಾ ಅಂಬಲ ಧನ್ಯವಾದವಿತ್ತರು.

Related posts

ಉಜಿರೆ ಬದುಕು‌ ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

Suddi Udaya

ಪುದುವೆಟ್ಟು: ಮಿಯ್ಯಾರು ಜೈ ಭೀಮ್ ವಾಲಿಬಾಲ್ ಲೀಗ್ ಅಸೋಸಿಯೇಷನ್ ವತಿಯಿಂದ ವಾಲಿಬಾಲ್ ಪಂದ್ಯಾಟ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ.ಚಿರನ್ವಿ ಜೈನ್ ಗೆ ಪದವಿ

Suddi Udaya
error: Content is protected !!