27.1 C
ಪುತ್ತೂರು, ಬೆಳ್ತಂಗಡಿ
June 28, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹಳೇಪೇಟೆ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಉಜಿರೆ : ಮೊಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ, ಉಜಿರೆ ಇದರ ಅಂಗ ಸಂಸ್ಥೆಯಾದ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್, ಹಳೇಪೇಟೆ ಇದರ ಮಹಾಸಭೆಯು ಶುಕ್ರವಾರ ಜುಮಾ ನಮಾಝಿನ ಬಳಿಕ ಮದರಸದ ಹಾಲ್‌ನಲ್ಲಿ ನಡೆಯಿತು.

ಶಾಕಿರ್ ಉಜಿರೆ ದುಆ ನೆರವೇರಿಸುವ ಮೂಲಕ ಸಭೆಗೆ ಚಾಲನೆ ನೀಡಿದರು. ಬಳಿಕ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಇದರ ಕಾರ್ಯದರ್ಶಿ ಫಝಲ್ ಅವರು ವಾರ್ಷಿಕ ವರದಿಯನ್ನು ಮಂಡಿಸಿದರು. ಬಳಿಕ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಶಾಕಿರ್ ಉಜಿರೆ, ಕಾರ್ಯದರ್ಶಿಯಾಗಿ ಸಹಲ್ ನೀರ್ಸಾಲ್, ಉಪಾಧ್ಯಕ್ಷರಾಗಿ ಅಶ್ರಫ್ ಕುಂಟಿನಿ ಹಾಗೂ ಶಕೀಬ್ ಕುಂಟಿನಿ, ಜೊತೆ ಕಾರ್ಯದರ್ಶಿಯಾಗಿ ಅಲ್ಫಾಝ್ ಕುಂಟಿನಿ ಮತ್ತು ಕೋಶಾಧಿಕಾರಿಯಾಗಿ ಮುಬೀನ್ ಅತ್ತಾಜೆ ಆಯ್ಕೆಯಾದರು.

ಸಲಹೆಗರರಾಗಿ ಮೊಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ, ಉಜಿರೆ ಆಡಳಿತ ಸಮಿತಿಯ ಅಧ್ಯಕ್ಷರು ಅಬೂಬಕ್ಕರ್ ಸುಪ್ರೀಂ, ಕಾರ್ಯದರ್ಶಿ ಹಾರಿಸ್ , ಬಿ.ಎಂ. ಹನೀಫ್ ಮತ್ತು ಹನೀಫ್ ಯು.ಕೆ. ಹಾಗೂ ದಾವೂದ್ ಆಯ್ಕೆಯಾದರು.

ಮಹಾಸಭೆಯಲ್ಲಿ ಕೇಂದ್ರ ಕರಿಯದ ಹಾಗೂ ಉಜಿರೆ, ಕಕ್ಕೇಜಲ್, ಕುಂಟಿನಿ, ಅತ್ತಾಜೆ ಮತ್ತು ಕಕ್ಕಿಯಾನ ಕರಿಯದ ಯಂಗ್ ಮೆನ್ಸ್‌ನ ಸರ್ವ ಸದಸ್ಯರು ಹಾಗೂ ಜಮಾಅತ್‌ನ ಯುವಕರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮೊಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ, ಉಜಿರೆ ಆಡಳಿತ ಸಮಿತಿಯ ಅಧ್ಯಕ್ಷರು ಅಬೂಬಕ್ಕರ್ ಸುಪ್ರೀಂ, ಕಾರ್ಯದರ್ಶಿ ಹಾರಿಸ್ , ಜೊತೆ ಕಾರ್ಯದರ್ಶಿ ಹಂಝ, ಸದಸ್ಯ ಕಾದರ್ ಎಸ್.ಎ, ಕೋಶಾಧಿಕಾರಿ ಮೊಹಮ್ಮದ್ ಸಅದಿ ಉಪಸ್ಥಿತರಿದ್ದರು.

Related posts

ಕುತ್ಲೂರು ಉ. ಹಿ.ಪ್ರಾ. ಶಾಲೆಯ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಏ.18: ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಮಂದಾರ ಸಂಭ್ರಮ-2026

Suddi Udaya

ಬಂದಾರು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya

ಬಳಂಜ ಗ್ರಾ.ಪಂ ಹಾಗೂ ಅರಣ್ಯ ಇಲಾಖೆಯಿಂದ ವನಮಹೋತ್ಸವ ಆಚರಣೆ

Suddi Udaya

ವಾಣಿ ಕಾಲೇಜಿನಲ್ಲಿ ನಿಹಾರ್ ಎಸ್. ಆರ್‌ಗೆ ಅಭಿನಂದನೆ

Suddi Udaya
error: Content is protected !!