ಉಜಿರೆ :ಕಳೆದ 15 ವರ್ಷಗಳಿಂದ ಗ್ರಾಹಕರ ವಿಶ್ವಾಸ, ಪ್ರೀತಿ ಹಾಗೂ ಪ್ರೋತ್ಸಾಹದೊಂದಿಗೆ ಯಶಸ್ವಿಯಾಗಿ ಸೇವೆ ಸಲ್ಲಿಸುತ್ತಿರುವ ದುರ್ಗಾ ಮೊಬೈಲ್ಸ್ ಸೇಲ್ಸ್ & ಸರ್ವೀಸ್, ಉಜಿರೆ ಇದೀಗ ನವೀಕೃತಗೊಂಡು ಜೂ 27ರಂದು ಪ್ರಾರಂಭಗೊಂಡಿದೆ.

ಉಜಿರೆ ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ವೈ, ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ಬಿ.ಎಸ್, ಮಾಜಿ ಅಧ್ಯಕ್ಷ ಅರವಿಂದ್ ಕಾರಂತ್, ಗ್ರಾಪಂ ಮಾಜಿ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಕಲ್ಮಂಜ ಗ್ರಾ.ಪಂ ಮಾಜಿ ಅಧ್ಯಕ್ಷ ಶ್ರೀಧರ್, ಉದ್ಯಮಿ ಪ್ರವೀಣ್ ಫೆರ್ನಾಂಡೀಸ್ ಹಳ್ಳಿಮನೆ, ಜಯಂತ್ ನಮನ ಬೇಕರಿ, ಬೆಳ್ತಂಗಡಿ ಸುದ್ದಿ ಉದಯ ಪತ್ರಿಕೆಯ ಮುಖ್ಯಸ್ಥರಾದ ಸಂತೋಷ್ ಪಿ ಕೋಟ್ಯಾನ್, ಸುಪ್ರೀಮ್ ಲಾಡ್ಜ್ ಮಾಲಕ ಅಬೂಬಕ್ಕರ್, ಉದ್ಯಮಿ ವಿಜಯ್ ಅತ್ತಾಜೆ, ಬಿಎಂಎಸ್ ರಾಜ್ಯ ಕಾರ್ಯದರ್ಶಿ ಕುಮಾರ್ ನಾಥ್ ನಿಡಿಗಲ್, ತಾಲೂಕು ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಪೂವಪ್ಪ ಭಂಡಾರಿ, ಗಣೇಶ್ ಭಂಡಾರಿ ನಿಡಿಗಲ್ ಮೊದಲಾದವರು ಆಗಮಿಸಿ ಶುಭ ಹಾರೈಸಿದರು.
ನವೀಕೃತಗೊಂಡ ಮಳಿಗೆಯಲ್ಲಿ ಬೆಳಿಗ್ಗೆ ವಾಸ್ತುಪೂಜೆ ,ಗಣಹೋಮ, ಪೂಜಾ ಕಾರ್ಯಕ್ರಮವನ್ನು ನಡೆಸಲಾಯಿತು.
ಸಂಸ್ಥೆಯ ಮಾಲಕ ವಿಶ್ವನಾಥ ಭಂಡಾರಿ- ಮೀನಾಕ್ಷಿ ವಿ ಭಂಡಾರಿ ಮತ್ತು ಕುಟುಂಬದವರು ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.












