23.3 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ದಿನಾಚರಣೆ ಹಾಗೂ ನಶಾಮುಕ್ತ ಭಾರತ ಪ್ರತಿಜ್ಞಾವಿಧಿ ಬೋಧನೆ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ (ರಿ).ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್
ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿ ನ ಪದವಿಪೂರ್ವ ವಿಭಾಗದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ಮತ್ತು ವ್ಯಸನ ನಿವಾರಣೆ ಮತ್ತು ನಿಯಂತ್ರಣ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಸಂಪನ್ಮೂಲಗಳ ವ್ಯಕ್ತಿಯಾಗಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ವಿಂದ್ಯಾಶ್ರೀ.ಎ ಮಾತನಾಡಿ ಭವಿಷ್ಯದ ಆಶಾಕಿರಣ ಯುವಜನತೆಯನ್ನು ಆವರಿಸಿಕೊಂಡಿರುವ ಮಾದಕ ದ್ರವ್ಯ ಗಳು ಒಂದು ಗಂಭೀರ ಹಾಗೂ ಜಾಗತಿಕ ಸಮಸ್ಯೆ ಯಾಗಿ ಹೊಸ ಪಿಡುಗುಗಳಾಗಿ ಸಮಾಜದ ಸ್ವಾಸ್ಥ್ಯವನ್ನು ಕೆಡುಸುತ್ತಿರುವುದು ನಿಜಕ್ಕೂ ಆತಂಕಕಾರಿ ಹಾಗೂ ನಾವೆಲ್ಲರೂ ಒಟ್ಟಾಗಿ ಸಮಾಜವನ್ನು ಸಬಲೀಕರಣಗೊಳಿಸೋಣ, ಮಾದಕ ದ್ರವ್ಯಗಳನ್ನು ತ್ಯಜಸೋಣ ಮತ್ತು ಆರೋಗ್ಯಕರ ಭಾರತವನ್ನು ನಿರ್ಮಿಸೋಣ ಎಂದು ಕರೆ ನೀಡಿದರು.


ಮಾದಕ ವಸ್ತು ಸೇವನೆ ಮಾಡದಿರಲು ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು.
ವಿದ್ಯಾಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ ನಾಯಕ್, ಪದವಿ ವಿಭಾಗದ ಮುಖ್ಯಸ್ಥೆಯಾದ ದೀಕ್ಷಿತಾ , ಪದವಿ ಪೂರ್ವ ವಿಭಾಗದ ಮುಖ್ಯಸ್ಥೆಯಾದ ಶ್ರೀಮತಿ ಸೌಮ್ಯ ಎನ್ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.
ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ಮಾಲಾಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ

Suddi Udaya

ಶರತ್ ಗೋರೆ ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದ ಶಾಸಕ ಹರೀಶ್ ಪೂಂಜ

Suddi Udaya

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

Suddi Udaya

ವೇಣೂರು;ಪಡ್ಡoದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya

ಉಜಿರೆ ಓಡಲ ಕೆದ್ಲ ಸುಬ್ರಹ್ಮಣ್ಯ ನಗರ ನಾಗ ಬನದಲ್ಲಿ ಹಾಲಭಿಷೇಕ, ತಂಬಿಲ ವಿಶೇಷ ಪೂಜೆ

Suddi Udaya
error: Content is protected !!