23.3 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಲೆಮರೆಸಿಕೊಂಡಿರುವ ವಿಠಲ್ ಗೌಡರ ಬಂಧನಕ್ಕಾಗಿ ಪೊಲೀಸರಿಂದ ಹುಡುಕಾಟ

ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಕೋರ್ಟ್ ತಡೆಯಾಜ್ಞೆಯನ್ನು ಉಲ್ಲಂಘಿಸಿದ ಆರೋಪದಡಿ ಧರ್ಮಸ್ಥಳ ಪಾಂಗಾಳ ನಿವಾಸಿ ವಿಠಲ ಗೌಡ ವಿರುದ್ಧ ಬಂಧನ ಆದೇಶ ಜಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ನ್ಯಾಯಾಲಯವು ಈ ಹಿಂದೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯ ಆದೇಶಕ್ಕೆ ವಿಠಲ ಗೌಡ ಅಗೌರವ ತೋರಿಸಿದ್ದರು. ತಡೆಯಾಜ್ಞೆಯನ್ನು ಅವರು ಉಲ್ಲಂಘಿಸಿದ ಕಾರಣ, ನ್ಯಾಯಾಂಗ ನಿಂದನೆ ಪ್ರಕರಣದಡಿ ನ್ಯಾಯಾಲಯವು ಇದೀಗ ಬಂಧನಕ್ಕೆ ಆದೇಶಿಸಿದೆ. ಜೂನ್ 8ರಂದು ಬಂಧನ ಆದೇಶ ಜಾರಿಯಾಗಿದ್ದು, ಜೂನ್ 30ರೊಳಗೆ ಬಂಧಿಸಬೇಕು ಎಂದು ಕೋರ್ಟ್ ಸೂಚಿಸಿತ್ತು.

ಅಧಿಕಾರಿಗಳು ಬೆಳ್ತಂಗಡಿಯ ವಿಠಲ್ ಗೌಡ ನಿವಾಸಕ್ಕೆ ತೆರಳಿದ್ದು, ಈ ವೇಳೆ ಅವರು ಪತ್ತೆಯಾಗಿಲ್ಲ. ವಿಠಲ್ ಗೌಡ ಇತ್ತೀಚೆಗೆ ಮನೆಗೆ ಬಂದಿಲ್ಲ ಎಂದು ಹೇಳಿದ್ದಾರೆಂದು ವರದಿಯಾಗಿದೆ.
ವಿಠಲ್ ಗೌಡ ಕಳೆದ ನಾಲ್ಕು ತಿಂಗಳಿನಿಂದ ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ವಿಠಲ ಗೌಡರನ್ನು ಬಂಧಿಸಲು ಇಂದು (ಜೂ.27) ಬೆಂಗಳೂರಿನಿಂದ ಕೋರ್ಟ್ ಅಧಿಕಾರಿಗಳು ಬಂದಿದ್ದು, ಸ್ಥಳೀಯ ಪೊಲೀಸರ ಸಹಕಾರದಿಂದ ಹುಡುಕಾಟ ನಡೆಸುತ್ತಿದ್ದಾರೆ. ಕೋರ್ಟ್ ಅಧಿಕಾರಿಗಳು ಆತನ ಮನೆ, ಕುಸುಮಾವತಿಯವರ ಮನೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.

Related posts

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ವಿ.ಹಿಂ.ಪ. ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗದ ವತಿಯಿಂದ ಗೋಪೂಜೆ ಹಾಗೂ ದೋಸೆ ಹಬ್ಬ

Suddi Udaya

ಗುರುವಾಯನಕೆರೆ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್, ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮ ದಿನಾಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಜೆಕಾಂ ನೂತನ‌ ಅಧ್ಯಕ್ಷರಾಗಿ ಉದ್ಯಮಿ ವಿಶಾಲ್ ಅಗಷ್ಟೀನ್ ಆಯ್ಕೆ

Suddi Udaya
error: Content is protected !!