June 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಲೆಮರೆಸಿಕೊಂಡಿರುವ ವಿಠಲ್ ಗೌಡರ ಬಂಧನಕ್ಕಾಗಿ ಪೊಲೀಸರಿಂದ ಹುಡುಕಾಟ

ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಕೋರ್ಟ್ ತಡೆಯಾಜ್ಞೆಯನ್ನು ಉಲ್ಲಂಘಿಸಿದ ಆರೋಪದಡಿ ಧರ್ಮಸ್ಥಳ ಪಾಂಗಾಳ ನಿವಾಸಿ ವಿಠಲ ಗೌಡ ವಿರುದ್ಧ ಬಂಧನ ಆದೇಶ ಜಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ನ್ಯಾಯಾಲಯವು ಈ ಹಿಂದೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯ ಆದೇಶಕ್ಕೆ ವಿಠಲ ಗೌಡ ಅಗೌರವ ತೋರಿಸಿದ್ದರು. ತಡೆಯಾಜ್ಞೆಯನ್ನು ಅವರು ಉಲ್ಲಂಘಿಸಿದ ಕಾರಣ, ನ್ಯಾಯಾಂಗ ನಿಂದನೆ ಪ್ರಕರಣದಡಿ ನ್ಯಾಯಾಲಯವು ಇದೀಗ ಬಂಧನಕ್ಕೆ ಆದೇಶಿಸಿದೆ. ಜೂನ್ 8ರಂದು ಬಂಧನ ಆದೇಶ ಜಾರಿಯಾಗಿದ್ದು, ಜೂನ್ 30ರೊಳಗೆ ಬಂಧಿಸಬೇಕು ಎಂದು ಕೋರ್ಟ್ ಸೂಚಿಸಿತ್ತು.

ಅಧಿಕಾರಿಗಳು ಬೆಳ್ತಂಗಡಿಯ ವಿಠಲ್ ಗೌಡ ನಿವಾಸಕ್ಕೆ ತೆರಳಿದ್ದು, ಈ ವೇಳೆ ಅವರು ಪತ್ತೆಯಾಗಿಲ್ಲ. ವಿಠಲ್ ಗೌಡ ಇತ್ತೀಚೆಗೆ ಮನೆಗೆ ಬಂದಿಲ್ಲ ಎಂದು ಹೇಳಿದ್ದಾರೆಂದು ವರದಿಯಾಗಿದೆ.
ವಿಠಲ್ ಗೌಡ ಕಳೆದ ನಾಲ್ಕು ತಿಂಗಳಿನಿಂದ ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ವಿಠಲ ಗೌಡರನ್ನು ಬಂಧಿಸಲು ಇಂದು (ಜೂ.27) ಬೆಂಗಳೂರಿನಿಂದ ಕೋರ್ಟ್ ಅಧಿಕಾರಿಗಳು ಬಂದಿದ್ದು, ಸ್ಥಳೀಯ ಪೊಲೀಸರ ಸಹಕಾರದಿಂದ ಹುಡುಕಾಟ ನಡೆಸುತ್ತಿದ್ದಾರೆ. ಕೋರ್ಟ್ ಅಧಿಕಾರಿಗಳು ಆತನ ಮನೆ, ಕುಸುಮಾವತಿಯವರ ಮನೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್:ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರದಾನ

Suddi Udaya

ನಾಡಿನಾದ್ಯಂತ ನವರಾತ್ರಿ ಸಂಭ್ರಮ; ಕರಾವಳಿಯಲ್ಲಿ ಮಾರ್ನೆಮಿ ವೇಷಗಳ ಸದ್ದು ಆರಂಭ

Suddi Udaya

ಅಯೋಧ್ಯೆ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆಯ ಪ್ರಯುಕ್ತ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಉಜಿರೆ: ಪಾಕತಜ್ಞ ಕೃಷ್ಣಮೂರ್ತಿ ರಾವ್ ನಿಧನ

Suddi Udaya
error: Content is protected !!