27.1 C
ಪುತ್ತೂರು, ಬೆಳ್ತಂಗಡಿ
June 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಜೈನ್ ಮಿಲನ್ ಮಾಸಿಕ ಸಭೆ

ಬೆಳ್ತಂಗಡಿ : ಜೈನ್ ಮಿಲನಿನ ಮಾಸಿಕ ಕಾರ್ಯಕ್ರಮವು ಶ್ರೀ ಧ.ಮಂ.ಪದವಿ ಪೂರ್ವ ಕಾಲೇಜಿನಲ್ಲಿ ಜರಗಿತು. ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ಶ್ರೀ ಧ.ಮಂ.ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸ ಕರಾದ ಡಾ.ಮಹಾವೀರ ಜೈನ ಮಾತನಾಡಿ ಜೈನಧರ್ಮದ ಕರ್ಮ, ಅಹಿಂಸೆ, ಅನೇಕಾಂತಗಳೆಂಬ ಮೂರು ಪ್ರಮುಖ ಸಿದ್ಧಾಂತಗಳನ್ನು ಪ್ರಸ್ತಾಪಿತಸುತ್ತದೆ, ಇದರಲ್ಲಿ ಕರ್ಮಸಿದ್ಧಾಂತ ಪ್ರಧಾನವಾಗಿದೆ. ಜೀವಿಗಳ ಬದುಕಿನ ಎಲ್ಲಾ ಸುಖ, ದುಃಖ ಸಾವು, ನೋವುಗಳ ಅನುಭವಗಳಿಗೆ ಅವರವರ ಆತ್ಮನಿಗೆ ಬಂಧವಾದ ಕರ್ಮವೇ ಕಾರಣವಾಗಿದೆ, ಕರ್ಮಗಳು ಸ್ವಯಾರ್ಜಿತವಾಗಿದೆ. ಎಂಟು ಕರ್ಮಗಳು ಮುಖ್ಯವಾಗಿದ್ದು ಇದನ್ನು 148 ಬೇಧಗಳಾಗಿ ವಿಂಗಡಿಸಲಾಗಿದೆ‌. ಇದರಲ್ಲಿ ಮುಖ್ಯವಾದ ಏಳು ಕರ್ಮಗಳನ್ನು ಜೀವಿಯು ತನ್ನ ಸ್ವಪ್ರಯತ್ನನಿಂದ ಶುಭ ಅಥವಾ ಅಶುಭಗಳಾಗಿ ಪರಿವರ್ತಿಸಬಹುದು ಆದರೆ ಆಯುಕರ್ಮವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಭಾರತೀಯ ಜೈನ್ ಮಿಲನ್ ವಲಯ -8ರ ನಿರ್ದೇಶಕರಾದ ಬಿ. ಸೋಮಶೇಖರ್ ಶೆಟ್ಟಿ ಮಾತನಾಡಿ ಸಂಘಟನೆಯ ಮಹತ್ವದ ಮತ್ತು ಸದಸ್ಯರ ಸಕ್ರೀಯ ಭಾಗವಹಿಸುವಿಕೆಯ ಬಗ್ಗೆ ತಿಳಿಸಿದರು. ಬೆಳ್ತಂಗಡಿ ಜೈನ್ ಮಿಲನ್ ಅಧ್ಯಕ್ಷರಾದ ಡಾ. ಸನ್ಮತಿ ಕುಮಾರ್ ಬೆಳ್ತಂಗಡಿ ಜೈನ್ ಮಿಲನಿನ ಮಂದಿನ ಕಾರ್ಯಯೋಜನೆಯು ಬಗ್ಗೆ ತಿಳಿಸಿದರು.

ಜ್ಯೋತಿ ಕುಮಾರಿ ಎಂ. ಎನ್ ಹಿಂದಿನ ಸಭೆಯ ವರದಿಯನ್ನು ಮಂಡಿಸಿದರು. ರವೀಶ್ ಕುಮಾರ್ ಅತಿಥಿಗಳ ಪರಿಚಯವನ್ನು ಮಾಡಿದರು. ಬೆಳ್ತಂಗಡಿ ಜೈನ್ ಮಿಲನ್ ಕಾರ್ಯದರ್ಶಿ ಸುಮನ್ ಯು. ಎಸ್ ಕಾರ್ಯಕ್ರಮ ನಿರೂಪಿಸಿದರು. ಕಿರಣ್ ಕುಮಾರ್ ಜೈನ್ ವಂದಿಸಿದರು.

Related posts

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಮಲವಂತಿಗೆ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya

ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರು: ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!