23.3 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಜೂ. 27 ರಂದು ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳ ಮಾಸಿಕ ಬೆಂಬಲ ಸಭೆ ಮತ್ತು ಮಾಹಿತಿ ಕಾರ್ಯಕ್ರಮವು ಬೆಳ್ತಂಗಡಿ,
ಸಾಂತೋಮ್ ಟವರ್ ನಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಮೆಲ್ಬಿ ಪಿ ಸಿ ಮಾಲೀಕರು, ಸ್ಪಂದನ ಚಿಕಿತ್ಸಾ ಕೇಂದ್ರ ಬೆಳ್ತಂಗಡಿ ಹಾಗೂ ಶ್ರೀಮತಿ ಮಂಜು ಜೋಸೆಫ್ ಪ್ರಯೋಗ ಶಾಲಾ ತಂತ್ರಜ್ಞರು, ಸ್ಪಂದನ ಚಿಕಿಸ್ತಾ ಕೇಂದ್ರ ಬೆಳ್ತಂಗಡಿ ಆಗಮಿಸಿ, ಪೌಷ್ಟಿಕ ಆಹಾರದ ಕಿಟ್ ವಿತರಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಶ್ರೀಮತಿ ತೃಪ್ತಿ ಸಮುದಾಯ ಸಂಪರ್ಕ ಆರೋಗ್ಯ ಕೇಂದ್ರ ಹೊಂಗಿರಣ ನೆಟ್ವರ್ಕ್ ಕೇಂದ್ರ ಮಂಗಳೂರು ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪುಷ್ಪರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ
ಫಾ. ಆದರ್ಶ್ ಪಿ ಎಸ್ ಇವರು ಪ್ರಾಸ್ತವಿಕ ನುಡಿಯನ್ನು ಆಡಿದರು.


ನವಜೀವನ ಆರೈಕೆ ಹಾಗೂ ಬೆಂಬಲ ಕೇಂದ್ರದ ಸದಸ್ಯರು ಹಾಡನ್ನಾಡಿದರು.
ನವ ಜೀವನ ಬೆಂಬಲ ಕಾರ್ಯಕ್ರಮದ ಸದಸ್ಯೆ ಶ್ರೀಮತಿ ಪುಷ್ಪ ರವರು ಪ್ರಾರ್ಥನೆ ಹಾಡಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ವಿದ್ಯಾ ನಿಧಿ ಸಂಯೋಜಕಿ ಶ್ರೀಮತಿ ಜಿನಿ ಪಿ ಜೆ ಸ್ವಾಗತಿಸಿದರು. ನವ ಜೀವನ ಆರೈಕೆ ಬೆಂಬಲ ಸದಸ್ಯೆ ಶಾರದ ವಂದಿಸಿದರು.
ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಂಯೋಜಕಿ. ಶ್ರೇಯಾ ಕಾರ್ಯಕ್ರಮ ನಿರೂಪಿಸಿದರು.

Related posts

ಪಣಕಜೆ 23ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾವಿನಕಟ್ಟೆ ಮೋನಪ್ಪ ಶೆಟ್ಟಿ ನಿಧನ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್ಐಟಿ ಕಸ್ಟಡಿಗೆ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಕಿ. ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya

ವಿಕಲಚೇತನರ ಇಲಾಖೆ ರಾಜ್ಯ ಆಯುಕ್ತೆ ಲತಾ ಕುಮಾರಿ (ಐ.ಎ.ಎಸ್) ಧರ್ಮಸ್ಥಳ ಭೇಟಿ

Suddi Udaya
error: Content is protected !!