25.1 C
ಪುತ್ತೂರು, ಬೆಳ್ತಂಗಡಿ
August 13, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹಳೇಪೇಟೆ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಉಜಿರೆ : ಮೊಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ, ಉಜಿರೆ ಇದರ ಅಂಗ ಸಂಸ್ಥೆಯಾದ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್, ಹಳೇಪೇಟೆ ಇದರ ಮಹಾಸಭೆಯು ಶುಕ್ರವಾರ ಜುಮಾ ನಮಾಝಿನ ಬಳಿಕ ಮದರಸದ ಹಾಲ್‌ನಲ್ಲಿ ನಡೆಯಿತು.

ಶಾಕಿರ್ ಉಜಿರೆ ದುಆ ನೆರವೇರಿಸುವ ಮೂಲಕ ಸಭೆಗೆ ಚಾಲನೆ ನೀಡಿದರು. ಬಳಿಕ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಇದರ ಕಾರ್ಯದರ್ಶಿ ಫಝಲ್ ಅವರು ವಾರ್ಷಿಕ ವರದಿಯನ್ನು ಮಂಡಿಸಿದರು. ಬಳಿಕ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಶಾಕಿರ್ ಉಜಿರೆ, ಕಾರ್ಯದರ್ಶಿಯಾಗಿ ಸಹಲ್ ನೀರ್ಸಾಲ್, ಉಪಾಧ್ಯಕ್ಷರಾಗಿ ಅಶ್ರಫ್ ಕುಂಟಿನಿ ಹಾಗೂ ಶಕೀಬ್ ಕುಂಟಿನಿ, ಜೊತೆ ಕಾರ್ಯದರ್ಶಿಯಾಗಿ ಅಲ್ಫಾಝ್ ಕುಂಟಿನಿ ಮತ್ತು ಕೋಶಾಧಿಕಾರಿಯಾಗಿ ಮುಬೀನ್ ಅತ್ತಾಜೆ ಆಯ್ಕೆಯಾದರು.

ಸಲಹೆಗರರಾಗಿ ಮೊಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ, ಉಜಿರೆ ಆಡಳಿತ ಸಮಿತಿಯ ಅಧ್ಯಕ್ಷರು ಅಬೂಬಕ್ಕರ್ ಸುಪ್ರೀಂ, ಕಾರ್ಯದರ್ಶಿ ಹಾರಿಸ್ , ಬಿ.ಎಂ. ಹನೀಫ್ ಮತ್ತು ಹನೀಫ್ ಯು.ಕೆ. ಹಾಗೂ ದಾವೂದ್ ಆಯ್ಕೆಯಾದರು.

ಮಹಾಸಭೆಯಲ್ಲಿ ಕೇಂದ್ರ ಕರಿಯದ ಹಾಗೂ ಉಜಿರೆ, ಕಕ್ಕೇಜಲ್, ಕುಂಟಿನಿ, ಅತ್ತಾಜೆ ಮತ್ತು ಕಕ್ಕಿಯಾನ ಕರಿಯದ ಯಂಗ್ ಮೆನ್ಸ್‌ನ ಸರ್ವ ಸದಸ್ಯರು ಹಾಗೂ ಜಮಾಅತ್‌ನ ಯುವಕರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮೊಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ, ಉಜಿರೆ ಆಡಳಿತ ಸಮಿತಿಯ ಅಧ್ಯಕ್ಷರು ಅಬೂಬಕ್ಕರ್ ಸುಪ್ರೀಂ, ಕಾರ್ಯದರ್ಶಿ ಹಾರಿಸ್ , ಜೊತೆ ಕಾರ್ಯದರ್ಶಿ ಹಂಝ, ಸದಸ್ಯ ಕಾದರ್ ಎಸ್.ಎ, ಕೋಶಾಧಿಕಾರಿ ಮೊಹಮ್ಮದ್ ಸಅದಿ ಉಪಸ್ಥಿತರಿದ್ದರು.

Related posts

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ನೀರು: ಬಂಗಾಡಿ ಸಿಎ ಬ್ಯಾಂಕ್ ಹಾಗೂ ಜೈನ ಬಸದಿ ವತಿಯಿಂದ ಪೈಪ್ ಅಳವಡಿಕೆ: “ಸುದ್ದಿ ಉದಯ ಜನಧ್ವನಿ Effect”

Suddi Udaya

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

Suddi Udaya

ಚಾರ್ಮಾಡಿ: ನ್ಯೂ ಮೋನಿಯಾ, ಅತಿಸಾರ ಭೇದಿ ಬಗ್ಗೆ ಅರಿವು ಕಾರ್ಯಕ್ರಮ

Suddi Udaya
error: Content is protected !!