23.6 C
ಪುತ್ತೂರು, ಬೆಳ್ತಂಗಡಿ
June 28, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹಳೇಪೇಟೆ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಉಜಿರೆ : ಮೊಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ, ಉಜಿರೆ ಇದರ ಅಂಗ ಸಂಸ್ಥೆಯಾದ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್, ಹಳೇಪೇಟೆ ಇದರ ಮಹಾಸಭೆಯು ಶುಕ್ರವಾರ ಜುಮಾ ನಮಾಝಿನ ಬಳಿಕ ಮದರಸದ ಹಾಲ್‌ನಲ್ಲಿ ನಡೆಯಿತು.

ಶಾಕಿರ್ ಉಜಿರೆ ದುಆ ನೆರವೇರಿಸುವ ಮೂಲಕ ಸಭೆಗೆ ಚಾಲನೆ ನೀಡಿದರು. ಬಳಿಕ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಇದರ ಕಾರ್ಯದರ್ಶಿ ಫಝಲ್ ಅವರು ವಾರ್ಷಿಕ ವರದಿಯನ್ನು ಮಂಡಿಸಿದರು. ಬಳಿಕ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಶಾಕಿರ್ ಉಜಿರೆ, ಕಾರ್ಯದರ್ಶಿಯಾಗಿ ಸಹಲ್ ನೀರ್ಸಾಲ್, ಉಪಾಧ್ಯಕ್ಷರಾಗಿ ಅಶ್ರಫ್ ಕುಂಟಿನಿ ಹಾಗೂ ಶಕೀಬ್ ಕುಂಟಿನಿ, ಜೊತೆ ಕಾರ್ಯದರ್ಶಿಯಾಗಿ ಅಲ್ಫಾಝ್ ಕುಂಟಿನಿ ಮತ್ತು ಕೋಶಾಧಿಕಾರಿಯಾಗಿ ಮುಬೀನ್ ಅತ್ತಾಜೆ ಆಯ್ಕೆಯಾದರು.

ಸಲಹೆಗರರಾಗಿ ಮೊಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ, ಉಜಿರೆ ಆಡಳಿತ ಸಮಿತಿಯ ಅಧ್ಯಕ್ಷರು ಅಬೂಬಕ್ಕರ್ ಸುಪ್ರೀಂ, ಕಾರ್ಯದರ್ಶಿ ಹಾರಿಸ್ , ಬಿ.ಎಂ. ಹನೀಫ್ ಮತ್ತು ಹನೀಫ್ ಯು.ಕೆ. ಹಾಗೂ ದಾವೂದ್ ಆಯ್ಕೆಯಾದರು.

ಮಹಾಸಭೆಯಲ್ಲಿ ಕೇಂದ್ರ ಕರಿಯದ ಹಾಗೂ ಉಜಿರೆ, ಕಕ್ಕೇಜಲ್, ಕುಂಟಿನಿ, ಅತ್ತಾಜೆ ಮತ್ತು ಕಕ್ಕಿಯಾನ ಕರಿಯದ ಯಂಗ್ ಮೆನ್ಸ್‌ನ ಸರ್ವ ಸದಸ್ಯರು ಹಾಗೂ ಜಮಾಅತ್‌ನ ಯುವಕರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮೊಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ, ಉಜಿರೆ ಆಡಳಿತ ಸಮಿತಿಯ ಅಧ್ಯಕ್ಷರು ಅಬೂಬಕ್ಕರ್ ಸುಪ್ರೀಂ, ಕಾರ್ಯದರ್ಶಿ ಹಾರಿಸ್ , ಜೊತೆ ಕಾರ್ಯದರ್ಶಿ ಹಂಝ, ಸದಸ್ಯ ಕಾದರ್ ಎಸ್.ಎ, ಕೋಶಾಧಿಕಾರಿ ಮೊಹಮ್ಮದ್ ಸಅದಿ ಉಪಸ್ಥಿತರಿದ್ದರು.

Related posts

ತೆಂಕಕಾರಂದೂರು: ಆಟೋ ರಿಕ್ಷಾ ಹಾಗೂ ಬೈಕ್ ಅಪಘಾತ

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ನೂತನ ಬಿಷಪ್‌ರಿಗೆ ಸನ್ಮಾನ

Suddi Udaya

ಜ.20: ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ

Suddi Udaya

ಅಕ್ರಮ ಕಲ್ಲು ಕೋರೆ ವಿಷಯದಲ್ಲಿ ದಾಖಲಾದ ಎರಡು ಪ್ರಕರಣ: ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Suddi Udaya

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya

ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಅಳದಂಗಡಿಯ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಗೆ ಸೇರ್ಪಡೆ

Suddi Udaya
error: Content is protected !!