23.3 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಕಾರ್ಯಕ್ರಮ

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಕಾರ್ಯಕ್ರಮ ಅಭ್ಯಾಸ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿಕೊಂಡ ಅಭ್ಯಾಸ್ ಪಿ.ಯು ಕಾಲೇಜಿನ ಅಧ್ಯಕ್ಷ ಕಾರ್ತಿಕೇಯ ಎಂ. ಎಸ್ ಹಾಗೂ ಮುಖ್ಯ ಅತಿಥಿಯಾದ ಬೆಳ್ತಂಗಡಿ ತಾಲೂಕಿನ ಪೊಲೀಸ್ ಉಪ -ನೀರಿಕ್ಷಕ ಸಿಕಂದರ್ ಪಾಶ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡ ಅಭ್ಯಾಸ್ ಪಿ.ಯು ಕಾಲೇಜಿನ ಅಧ್ಯಕ್ಷ ಕಾರ್ತಿಕೇಯ ಎಂ. ಎಸ್ ರವರು ವಿದ್ಯಾರ್ಥಿಗಳನ್ನು ಕುರಿತು, ಯುವಜನರೇ, ನಶೆ ನಮ್ಮ ದೇಹಕ್ಕಷ್ಟೇ ಅಲ್ಲ, ನಮ್ಮ ದೇಶದ ಭವಿಷ್ಯಕ್ಕೂ ಮಾರಕ, ಡ್ರಗ್ಸ್ ಮುಕ್ತ ಭಾರತ ಕಟ್ಟುವುದು ನಮ್ಮೆಲ್ಲರ ಕರ್ತವ್ಯ, ಇದೇ ನಿಜವಾದ ದೇಶಭಕ್ತಿ ಹೀಗೆ ಹಲವಾರು ವಿಷಯಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.

ಮುಖ್ಯ ಅತಿಥಿಗಳಾದ ಬೆಳ್ತಂಗಡಿ ತಾಲೂಕಿನ ಪೊಲೀಸ್ ಉಪ -ನೀರಿಕ್ಷಕರಾದ ಸಿಕಂದರ್ ಪಾಶ ರವರು ವಿದ್ಯಾರ್ಥಿಗಳನ್ನ ಕುರಿತು NDPS ಕಾಯ್ದೆ,1985ರ ಪ್ರಕಾರ ಮಾದಕ ವಸ್ತುಗಳ ಸೇವನೆ, ಹೊಂದಾಣಿಕೆ ಮತ್ತು ಸಾಗಾಣಿಕೆ ಸಂಪೂರ್ಣ ಅಪರಾಧ. ಇದರಲ್ಲಿ ಸಿಕ್ಕಿಬಿದ್ದರೆ 10 ವರ್ಷದಿಂದ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ, ಆದ್ದರಿಂದ ಡ್ರಗ್ಸ್ ಗೆ ‘ನೋ’ ಹೇಳಿ ನಶಾ ಮುಕ್ತ ಭಾರತ ನಿರ್ಮಾಣಕ್ಕೆ ಕೈಜೋಡಿಸಿ, ಮಕ್ಕಳೇ, ನಿಮ್ಮ ಬದುಕು ಬೆಲೆಬಾಳುವ ಪುಸ್ತಕದಂತೆ, ಡ್ರಗ್ಸ್ ಅದರ ಪುಟಗಳನ್ನು ಸುಡುತ್ತದೆ. ಹಾಗಾಗಿ ನಶೆ ಬೇಡ ಅಂತ ಹೇಳಿ, ನಶಾ ಮುಕ್ತ ಭಾರತದ ಕನಸಿಗೆ ಕೈಜೋಡಿಸಿ. ಹೀಗೆ ಹಲವಾರು ವಿಷಯಗಳನ್ನ ತಿಳಿಸಿ ಪ್ರತಿಜ್ಞಾ ವಿಧಿ ಭೋಧಿಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಉಪನ್ಯಾಸಕ ಸುಧೀರ್ ನಿರೂಪಿಸಿದರು. ರಾಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ವಿದ್ಯಾಶ್ರೀ ಬಿ.ಎಸ್ ಸ್ವಾಗತಿಸಿದರು. ಹಾಗೂ ಎಲ್ಲಾ ಬೋಧಕೇತರ ಸಿಬ್ಬಂದಿ ವರ್ಗದವರೂ, ಸಹಾಯಕ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿ ಸ್ವಸ್ತಿ ಶ್ರೀ ಹೆಬ್ಬಾರ್ ಪ್ರಾರ್ಥನೆಗೈದರು, ಜೀವಶಾಸ್ತ್ರ ವಿಭಾಗದ ಉಪನ್ಯಾಸಕ ಚೆನ್ನಬಸವ ವಂದಿಸಿದರು.

Related posts

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ “ಪಂಜಿನ ಮೆರವಣಿಗೆ”

Suddi Udaya

ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರದಲ್ಲಿ ದಾರಂದ ಪ್ರತಿಷ್ಠೆ: ಡಿಸೆಂಬರ್ ತಿಂಗಳಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಷನ್ ಅಳದಂಗಡಿ ವಲಯದ ವಾರ್ಷಿಕ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಸಿರಿ ಕೇಂದ್ರ ಕಛೇರಿಗೆ ಭೇಟಿ

Suddi Udaya

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

Suddi Udaya

ಶಿಶಿಲ -ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಕಾರೆಗುಡ್ಡೆಯಲ್ಲಿ ರಸ್ತೆ ದುರಸ್ತಿ

Suddi Udaya
error: Content is protected !!